ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…