ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.
ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.

ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.
ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ ಹನುಮಂತನನ್ನು ಬೀಳ್ಕೊಟ್ಟರು.

62 ಅಡಿ ಎತ್ತರದ ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.

ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಕೆತ್ತನೆ ಕಾರ್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.

ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.

62 ಅಡಿ ಉದ್ದ, 25 ಅಡಿ ಅಗಲ, 750 ಟನ್ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್ಗಳ ಬೃಹತ್ ಟ್ರಕ್ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…