ಸುದ್ದಿ

ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

80

ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದರೊಂದಿಗೆ ಅತೀ ಹಿರಿಯ ವಯಸ್ಸಿನಲ್ಲಿ ಮಕ್ಕಳನ್ನು ಹಡೆದರೆಂಬ ಖ್ಯಾತಿಗೆ ಈ ಅಜ್ಜಿ ಪಾತ್ರರಾಗಿದ್ದಾರೆ. ಈ ಮೊದಲು ಪಂಜಾಬಿನ ಅಮೃತ್ ಸರದ 72ರ ವಯಸ್ಸಿನ ದಾಲ್ಜಿಂದರ್ ಕೌರ್ ಎಂಬುವವರು ಮಗುವಿಗೆ ಜನ್ಮ ನೀಡಿದ್ದರು. ಈರಮಟ್ಟಿ ಮಂಗಯಮ್ಮ ಆ ದಾಖಲೆಯನ್ನು ಮುರಿದಿದ್ದಾರೆ.ಇ. ರಾಜಾರಾವ್​ (80) ಜತೆ 57 ವರ್ಷಗಳ ಹಿಂದೆ ಮಂಗಮ್ಮ ಮದುವೆಯಾಗಿದ್ದರು. ಅಂದಿನಿಂದ ಇವರಿಗೆ ಮಕ್ಕಳನ್ನು ಹೊಂದಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ಹಲವು ವರ್ಷಗಳಿಂದ ಈ ದಂಪತಿ ಹರಕೆ ಹೊರದ ದೇವರಿಲ್ಲ, ಹೋಗದ ಆಸ್ಪತ್ರೆಗಳಿಲ್ಲ. ಏನೆ ಮಾಡಿದರೂ ಮಕ್ಕಳನ್ನು ಪಡೆಯಲು ಸಾಧ್ಯವಾಗಿರಲಿಲ್ಲ.

74ರಲ್ಲಿ ಕನಸು ನನಸಾಯ್ತು
ವಯಸ್ಸು 70 ದಾಟಿದರೂ ಮಕ್ಕಳನ್ನು ಪಡೆಯುವ ಆಸೆ ಕೈಬಿಟ್ಟಿರಲಿಲ್ಲ.ಇದೇ ಕೊರಗಿನಲ್ಲಿರುವಾಗ ತಮ್ಮ ಮನೆಯ ಬಳಿಯ ಮಹಿಳೆಯೊಬ್ಬರು ಇನ್​ವರ್ಟೋ ಫರ್ಟಿಲೈಷೇಷನ್​ (ಐವಿಎಫ್​) ಮೂಲಕ ಮಗು ಪಡೆದ ಸುದ್ದಿ ಕೇಳಿದ ಮಂಗಯಮ್ಮ ಇದೇ ಪದ್ಧತಿಯಲ್ಲಿ ಮಗುವನ್ನು ಹೊಂದಲು ಆಸೆ ಚಿಗುರೊಡೆಸಿಕೊಂಡಿದ್ದಾರೆ.ಈಗಿನ ಆಧುನಿಕ ತಂತ್ರಜ್ಞಾನವಿರುವ ವಿಟ್ರೊ ಫಲೀಕರಣ (ಐವಿಎಫ್), ಇಂಟ್ರಾಸೈಟೋಪ್ಲಾಸ್ಮಿಕ್ ವೀರ್ಯಾಣು ಇಂಜೆಕ್ಷನ್ (ಐಸಿಎಸ್ಐ), ಕ್ರಯೋಪ್ರೆಸರ್ವೇಶನ್ ಚಿಕಿತ್ಸೆಯ ಮೂಲಕ ಅವಧಿ ಮೀರಿದ ನಂತರವು ಮಕ್ಕಳನ್ನು ಪಡೆಯಬಹುದು ಎಂದು ಹೈದರಾಬಾದ್​ನ ಕೊತ್ತಾಪೇಟ್​ನ ಅಹಲ್ಯಾ ಹಾಸ್ಪಿಟಲ್​ನ ನಿರ್ದೇಶಕ ಡಾ. ಸನಕಯ್ಯಾಲ ಉಮಾಶಂಕರ್​ ಮಾಹಿತಿ ನೀಡಿದ್ದಾರೆ.

ವೈದ್ಯರ ಸಲಹೆ ಮೆರೆಗೆ ಮಗು ಪಡೆಯಲು ನಿರ್ಧರಿಸಿದ್ದಾರೆ. ಆದರೆ 50 ವರ್ಷದ ನಂತರ ಮಹಿಳೆಯರಲ್ಲಿ ಮುಟ್ಟಿನ ಋತುಚಕ್ರವು ಕೊನೆಗೊಳ್ಳುತ್ತದೆ.ಆಗ ಬೇರೊಬ್ಬರ ಅಂಡಾಣು ಪಡೆದು, ಪತಿ ರಾಜಾರಾವ್​ ಅವರ ವೀರ್ಯದೊಂದಿಗೆ ಸಮ್ಮಿಳನಗೊಳಿಸಲಾಯಿತು. ಇದಾದ ನಂತರ ಮಂಗಮ್ಮ ಮೊದಲ ತಿಂಗಳಲ್ಲೇ ಗರ್ಭಧರಿಸಿದರು.ಗರ್ಭ ಧರಿಸಿದ ನಂತರದಲ್ಲಿ ಹೃದ್ರೋಗ, ಶ್ವಾಸಕೋಶ, ಹೆರಿಗೆ ಮತ್ತು ಸ್ತ್ರೀರೋಗ ಹಾಗೂ ಪೋಷಣ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಈರಾಮತ್ತಿ ಅವರ ಆರೋಗ್ಯವನ್ನು ಗಮನಿಸಲಾರಂಭಿಸಿತು. ಅವರಿಗೆ 74 ವರ್ಷವಾದ್ದರಿಂದ ಸಹಜ ಹೆರಿಗೆ ಸಾಧ್ಯವಿಲ್ಲದ ಕಾರಣ ಸಿಸೇರಿಯನ್​ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಯಿತು.

ಪ್ರಸವದ ನಂತರದಲ್ಲಿ ಗುರುತರವಾದ ಆರೋಗ್ಯ ಸಮಸ್ಯೆಗಳಿರುವಂತೆ ಕಾಣುತ್ತಿಲ್ಲ. ಆದರೆ ಇಳಿವಯಸ್ಸು ಆಗಿರುವುದರಿಂದ ಅವರಿಗೆ ಸ್ತನ್ಯಪಾನ ಮಾಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ನಾವು ಹಾಲಿನ ಬ್ಯಾಂಕ್​ನಿಂದ ಮಕ್ಕಳಿಗೆ ಹಾಲನ್ನು ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.‘ನನಗೆ ತುಂಬ ಖುಷಿಯಾಗಿದೆ. ಪತ್ನಿ ಗರ್ಭ ಧರಿಸಿದ ನಂತರ 9 ತಿಂಗಳು ಆಸ್ಪತ್ರೆಯಲ್ಲೇ ಇದ್ದೆವು.ಹಿಂದೆಯಲ್ಲ ಮಕ್ಕಳಿಗಾಗಿ ಪಟ್ಟ ಕಷ್ಟಕ್ಕೆ ಈಗ ಪ್ರತಿಫಲ ದೊರಕಿದೆ. ಇಬ್ಬರು ಮಕ್ಕಳನ್ನು ತುಂಬ ಚೆನ್ನಾಗಿ ನೋಡಿಕೊಳ್ಳುತ್ತೇವೆ’ ಎಂದು ಪತಿ ರಾಜಾರಾವ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…