ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದರೊಂದಿಗೆ ಅತೀ ಹಿರಿಯ ವಯಸ್ಸಿನಲ್ಲಿ ಮಕ್ಕಳನ್ನು ಹಡೆದರೆಂಬ ಖ್ಯಾತಿಗೆ ಈ ಅಜ್ಜಿ ಪಾತ್ರರಾಗಿದ್ದಾರೆ. ಈ ಮೊದಲು ಪಂಜಾಬಿನ ಅಮೃತ್ ಸರದ 72ರ ವಯಸ್ಸಿನ ದಾಲ್ಜಿಂದರ್ ಕೌರ್ ಎಂಬುವವರು ಮಗುವಿಗೆ ಜನ್ಮ ನೀಡಿದ್ದರು. ಈರಮಟ್ಟಿ ಮಂಗಯಮ್ಮ ಆ ದಾಖಲೆಯನ್ನು ಮುರಿದಿದ್ದಾರೆ.ಇ. ರಾಜಾರಾವ್ (80) ಜತೆ 57 ವರ್ಷಗಳ ಹಿಂದೆ ಮಂಗಮ್ಮ ಮದುವೆಯಾಗಿದ್ದರು. ಅಂದಿನಿಂದ ಇವರಿಗೆ ಮಕ್ಕಳನ್ನು ಹೊಂದಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ಹಲವು ವರ್ಷಗಳಿಂದ ಈ ದಂಪತಿ ಹರಕೆ ಹೊರದ ದೇವರಿಲ್ಲ, ಹೋಗದ ಆಸ್ಪತ್ರೆಗಳಿಲ್ಲ. ಏನೆ ಮಾಡಿದರೂ ಮಕ್ಕಳನ್ನು ಪಡೆಯಲು ಸಾಧ್ಯವಾಗಿರಲಿಲ್ಲ.

74ರಲ್ಲಿ ಕನಸು ನನಸಾಯ್ತು
ವಯಸ್ಸು 70 ದಾಟಿದರೂ ಮಕ್ಕಳನ್ನು ಪಡೆಯುವ ಆಸೆ ಕೈಬಿಟ್ಟಿರಲಿಲ್ಲ.ಇದೇ ಕೊರಗಿನಲ್ಲಿರುವಾಗ ತಮ್ಮ ಮನೆಯ ಬಳಿಯ ಮಹಿಳೆಯೊಬ್ಬರು ಇನ್ವರ್ಟೋ ಫರ್ಟಿಲೈಷೇಷನ್ (ಐವಿಎಫ್) ಮೂಲಕ ಮಗು ಪಡೆದ ಸುದ್ದಿ ಕೇಳಿದ ಮಂಗಯಮ್ಮ ಇದೇ ಪದ್ಧತಿಯಲ್ಲಿ ಮಗುವನ್ನು ಹೊಂದಲು ಆಸೆ ಚಿಗುರೊಡೆಸಿಕೊಂಡಿದ್ದಾರೆ.ಈಗಿನ ಆಧುನಿಕ ತಂತ್ರಜ್ಞಾನವಿರುವ ವಿಟ್ರೊ ಫಲೀಕರಣ (ಐವಿಎಫ್), ಇಂಟ್ರಾಸೈಟೋಪ್ಲಾಸ್ಮಿಕ್ ವೀರ್ಯಾಣು ಇಂಜೆಕ್ಷನ್ (ಐಸಿಎಸ್ಐ), ಕ್ರಯೋಪ್ರೆಸರ್ವೇಶನ್ ಚಿಕಿತ್ಸೆಯ ಮೂಲಕ ಅವಧಿ ಮೀರಿದ ನಂತರವು ಮಕ್ಕಳನ್ನು ಪಡೆಯಬಹುದು ಎಂದು ಹೈದರಾಬಾದ್ನ ಕೊತ್ತಾಪೇಟ್ನ ಅಹಲ್ಯಾ ಹಾಸ್ಪಿಟಲ್ನ ನಿರ್ದೇಶಕ ಡಾ. ಸನಕಯ್ಯಾಲ ಉಮಾಶಂಕರ್ ಮಾಹಿತಿ ನೀಡಿದ್ದಾರೆ.

ವೈದ್ಯರ ಸಲಹೆ ಮೆರೆಗೆ ಮಗು ಪಡೆಯಲು ನಿರ್ಧರಿಸಿದ್ದಾರೆ. ಆದರೆ 50 ವರ್ಷದ ನಂತರ ಮಹಿಳೆಯರಲ್ಲಿ ಮುಟ್ಟಿನ ಋತುಚಕ್ರವು ಕೊನೆಗೊಳ್ಳುತ್ತದೆ.ಆಗ ಬೇರೊಬ್ಬರ ಅಂಡಾಣು ಪಡೆದು, ಪತಿ ರಾಜಾರಾವ್ ಅವರ ವೀರ್ಯದೊಂದಿಗೆ ಸಮ್ಮಿಳನಗೊಳಿಸಲಾಯಿತು. ಇದಾದ ನಂತರ ಮಂಗಮ್ಮ ಮೊದಲ ತಿಂಗಳಲ್ಲೇ ಗರ್ಭಧರಿಸಿದರು.ಗರ್ಭ ಧರಿಸಿದ ನಂತರದಲ್ಲಿ ಹೃದ್ರೋಗ, ಶ್ವಾಸಕೋಶ, ಹೆರಿಗೆ ಮತ್ತು ಸ್ತ್ರೀರೋಗ ಹಾಗೂ ಪೋಷಣ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಈರಾಮತ್ತಿ ಅವರ ಆರೋಗ್ಯವನ್ನು ಗಮನಿಸಲಾರಂಭಿಸಿತು. ಅವರಿಗೆ 74 ವರ್ಷವಾದ್ದರಿಂದ ಸಹಜ ಹೆರಿಗೆ ಸಾಧ್ಯವಿಲ್ಲದ ಕಾರಣ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಯಿತು.
ಪ್ರಸವದ ನಂತರದಲ್ಲಿ ಗುರುತರವಾದ ಆರೋಗ್ಯ ಸಮಸ್ಯೆಗಳಿರುವಂತೆ ಕಾಣುತ್ತಿಲ್ಲ. ಆದರೆ ಇಳಿವಯಸ್ಸು ಆಗಿರುವುದರಿಂದ ಅವರಿಗೆ ಸ್ತನ್ಯಪಾನ ಮಾಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ನಾವು ಹಾಲಿನ ಬ್ಯಾಂಕ್ನಿಂದ ಮಕ್ಕಳಿಗೆ ಹಾಲನ್ನು ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.‘ನನಗೆ ತುಂಬ ಖುಷಿಯಾಗಿದೆ. ಪತ್ನಿ ಗರ್ಭ ಧರಿಸಿದ ನಂತರ 9 ತಿಂಗಳು ಆಸ್ಪತ್ರೆಯಲ್ಲೇ ಇದ್ದೆವು.ಹಿಂದೆಯಲ್ಲ ಮಕ್ಕಳಿಗಾಗಿ ಪಟ್ಟ ಕಷ್ಟಕ್ಕೆ ಈಗ ಪ್ರತಿಫಲ ದೊರಕಿದೆ. ಇಬ್ಬರು ಮಕ್ಕಳನ್ನು ತುಂಬ ಚೆನ್ನಾಗಿ ನೋಡಿಕೊಳ್ಳುತ್ತೇವೆ’ ಎಂದು ಪತಿ ರಾಜಾರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…