India

ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

137

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:

ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್​ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್​ ಸಂಕುಲ್​ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ.

ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.

35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.

ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ.

ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.

ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

    ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಜ್ಯೋತಿಷ್ಯ

    ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…