ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್ ಸಂಕುಲ್ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ.
ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.
35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.
ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…