India

ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

129

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:

ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್​ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್​ ಸಂಕುಲ್​ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ.

ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.

35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.

ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ.

ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.

ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…