News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
India

ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

137

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:

ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್​ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್​ ಸಂಕುಲ್​ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ.

ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.

35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.

ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ.

ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.

ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…