News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

2171

ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಆರೋಗ್ಯ ಸುಧಾರಿಸವುದನ್ನು ಪ್ರಾರಂಭಿಸಲು ಅತ್ಯುತ್ತಮ ದಿನ.ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ಹಣಕಾಸು ಉತ್ತಮವಾಗಿರುವುದು.ನಿಮ್ಮ ವೈವಾಹಿಕ ಜೀವನದಲ್ಲಿ ಖುಷಿ ಕಡಿಮೆಯಾದ ಭಾಸ ನಿಮಗೆ ಉಂಟಾಗಬಹುದು. ನಿಮ್ಮ ವೈವಾಹಿಕ ಜೀವನವನ್ನು ಸುಸ್ಥಿತಿಯಲ್ಲಿಡಲು ವಾಗ್ವಾದಗಳನ್ನು ದೂರವಿಡಬೇಕು. ವೆಚ್ಚ ಹೆಚ್ಚಾಗಬಹುದು.ಗಳಿಕೆಯೂ ಇರುತ್ತದೆ. ಶಾಪಿಂಗ್ ಮತ್ತು ಇತರ ಚಟುವಟಿಕೆಗಳು ನಿಮ್ಮನ್ನು ದಿನವಿಡೀ ಬಿಡುವಿಲ್ಲದಂತಿಡುತ್ತವೆ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ.

ವೃಷಭ:-

ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ.

ಮಿಥುನ:

ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಸಣ್ಣಪುಟ್ಟ ಸಮಸ್ಯೆಗಳ ಹೊರತಾಗಿಯೂ ಕೌಟುಂಬಿಕ ಜೀವನ ಸೌಹಾರ್ದಯುತವಾಗಿರುತ್ತದೆ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ.

ಕಟಕ :-

ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ. ನಿಮ್ಮ ಆತ್ಮೀಯರಲ್ಲಿ ಕೆಲವರು ನಿಮ್ಮನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದಿರಬಹುದು ಮತ್ತು ಇದು ನಿಮ್ಮ ಸಂಬಂಧ ಹಳಸಲು ಕಾರಣವಾಗಬಹುದು. ನೀವು ಇಂದು ಒಂದು ಪ್ರಮಾದ ಮಾಡಬಹುದಾಗಿದ್ದು ಇದು ನಿಮ್ಮ ವೈವಾಹಿಕ ಜೀವನಕ್ಕೆ ಧಕ್ಕೆ ತರಬಹುದು. ಮಕ್ಕಳ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು.

 ಸಿಂಹ:

ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ.ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು. ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

ಕನ್ಯಾ :-

ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ ಜಾಣತನದ ಅಗತ್ಯವಿದೆ.  ಗಾಳಿ ಸಂಬಂಧಿ ರೋಗಗಳು, ಗಂಟು ನೋವು ಇತ್ಯಾದಿ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಬಹುದು. ಅತಿಯಾದ ನಾರಿನಂಶವಿರುವ ಆಹಾರ ಸೇವಿಸಬೇಡಿ ಇಂದು ನಿಮ್ಮ ಜೀವನದಲ್ಲಿ ಮದುವೆ ಅದರ ಅತ್ಯುತ್ತಮ ಘಟ್ಟವನ್ನು ತಲುಪುತ್ತದೆ.

ತುಲಾ:

ನಿಮ್ಮ ಮಾತುಗಳು ಘರ್ಷಣೆಗೆ ಕಾರಣವಾಗಬಹುದಾದ್ದರಿಂದ, ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಧಿಗಳ ಹಠಾತ್ ಒಳಹರಿವು ನಿಮ್ಮ ಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುತ್ತದೆ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಇವತ್ತು ಡೇಟ್‌ಗೆ ಹೋದಲ್ಲಿ ವಿವಾದಾತ್ಮಕ ವಿಷಯಗಳನ್ನು ಕೆದಕುವುದನ್ನು ತಪ್ಪಿಸಿ. ನೀವು ನಿಮ್ಮ ಸಂಗಾತಿಯ ಜೊತೆ ಒಂದು ಆರಾಮವಾದ ದಿನವನ್ನು ಕಳೆಯುತ್ತೀರಿ. ಗುರುರಾಯರನ್ನು ಸ್ಮರಿಸಿ.

ವೃಶ್ಚಿಕ :-

ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ.ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ.

ಧನಸ್ಸು:

ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ.ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವು ಸಲಹೆ ಪಡೆಯಬಹುದು.  ನಿಮ್ಮನ್ನು ನಿಮ್ಮ ಪ್ರೀತಿ ಪಾತ್ರರಿಂದ ಒಮ್ಮೆ ದೂರವಿಡಬಹುದು. ಹೀಗಾಗಿ, ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಸಮತೋಲನ ಅಗತ್ಯವಿದೆ. ನಿಮ್ಮ ಸುತ್ತ ನಡೆಯುವುದನ್ನು ನೋಡಿಕೊಳ್ಳಿ – ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು.

ಮಕರ :-

ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ.ಮಕ್ಕಳು ತುಂಟರಾಗಿರುತ್ತಾರೆ. ಆದರೆ ಅವರು ಹೊಸ ಸಂಗತಿಗಳನ್ನು ತಿಳಿಯಲು ಆಸಕ್ತರಾಗಿರುತ್ತಾರೆ ಮತ್ತು ಅವರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ.

ಕುಂಭ:-

ಇಂದು ನೀವು ಸಲಹೆ ಕೊಟ್ಟರೆ ಅದನ್ನು ಸ್ವೀಕರಿಸಲೂ ಸಿದ್ಧವಾಗಿರಿ. ನೀವು ಹಲವು ಹೊಸ ಸಂಗತಿಗಳನ್ನು ಕಲಿಯುತ್ತೀರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಪ್ರಯಾಣ ಸಂತೋಷಕರ ಮತ್ತು ಹೆಚ್ಚು ಅನುಕೂಲಕರವಾಗಿರುತ್ತದೆ.

ಮೀನ:-

ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಸಂಬಂಧಿಗಳು ಬೆಂಬಲ ನೀಡುತ್ತಾರೆ ಮತ್ತು ನಿಮ್ಮ ಮನಸ್ಸಿಗೆ ಆ ಹೊರೆಯಾದ ಆ ತೊಂದರೆಯನ್ನು ಕಡಿಮೆ ಮಾಡುತ್ತಾರೆ. ನೀವು ತೂಕ ಹೆಚ್ಚಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಆಹಾರದ ಮೇಲೆ ನಿಗಾ ಇರಲಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.  ನೀವು ಬಾಳಸಂಗಾತಿ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ವೆಚ್ಚ ಮಾಡಬಹುದು. ನಿಮ್ಮ ಮಾತಿನ ಮೇಲೆ ನಿಯಂತ್ರಣವಿಲ್ಲದಿದ್ದಲ್ಲಿ ನೀವು ಸುಲಭವಾಗಿ ನಿಮ್ಮ ಖ್ಯಾತಿಗೆ ಧಕ್ಕೆ ತಂದುಕೊಳ್ಳಬಹುದು. ಪ್ರವಾಸಗಳು ಮತ್ತು ಪ್ರಯಾಣಗಳು ಆನಂದ ತರುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…