ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.


ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.