ಗ್ಯಾಜೆಟ್

ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

810

ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ.  ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.

ಇದನ್ನ ಸರಿ ಮಾಡುವುದಕ್ಕೆ ಸಾವಿರಾರು ರೂಪಾಯಿಗಳು ಖರ್ಚು ಮಾಡುತ್ತಾರೆ. ಆದರೆ ಇನ್ಮುಂದೆ ಹಾಗೇ ಮಾಡಬೇಡಿ. ಅದನ್ನ ಸರಿಪಡಿಸುವ ಟ್ರಿಕ್ಸ್ ನಾವು ಹೇಳಿ ಕೊಡುತ್ತೇವೆ…

1. ಮೊಬೈಲ್ ಸ್ವಿಚ್ ಆಫ್ ಮಾಡಿ…

ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

2. ನಿಮ್ಮ ಫೋನ್’ನ ಭಾಗಗಳನ್ನುಬಿಚ್ಚಿಡಿ…

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.

3.  ಬಿಸಿಲಿನಲ್ಲಿ ಇಡಿ…

ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.

ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

4.   ಅಕ್ಕಿಯೊಳಗೆ ಇಡಿ…

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

5.  ಇದನ್ನು ಮಾಡಲೇಬೇಡಿ..!

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ  ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.

6.  ಅತೀ ಹೆಚ್ಚು ಬಿಸಿಲಿನಲ್ಲಿ ಇಡಬೇಡಿ…

ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    “ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

    ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ವಿಸ್ಮಯ ಜಗತ್ತು

    ನ್ಯಾಯಾಲಯದ ಈ ಪ್ರಕರಣಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ! ಮುಂದೆ ಸಿಗೋದು ಇಲ್ಲ!ಇನ್ನೂ ವಾದ ನಡೀತಾ ಇದೆ!ಯಾಕೆ ಗೊತ್ತಾ?ಈ ಲೇಖನಿ ಓದಿ…

    ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.