ಜ್ಯೋತಿಷ್ಯ

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

211

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಇಂದಿನ ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ

ಮೇಷ:

ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ವೃಷಭ:-

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ.  ಆಂಜನೇಯ ಸ್ತೋತ್ರ ಪಠಿಸಿ.

ಮಿಥುನ:

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಕಟಕ :-

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

 ಸಿಂಹ:

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಕನ್ಯಾ :-

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.

ತುಲಾ:

ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ವೃಶ್ಚಿಕ :-

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ಧನಸ್ಸು:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಮಕರ :-

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ಕುಂಭ:-

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ಮೀನ:-

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸ್ಪೂರ್ತಿ

    ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

    ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…