ಕ್ರೀಡೆ

4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

3074

4 ಬಾಲ್‍ಗಳಿಗೆ 92 ರನ್‍ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.

ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

                            ಮೂಲ

ಅಂದು ನಡೆದಿದ್ದೇನು?

ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.

ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್‍ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್‍ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.

ಲಾಲ್ಮಾಟಿಯಾ ತಂಡದ ಆರೋಪ ಏನು?

ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.

ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.

ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಕಾನೂನು

    ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

    ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…