ಸಿನಿಮಾ

ಪಡ್ಡೆ ಹುಡುಗರ ನಿದ್ದೆ ಕದ್ದಿರೋ, ಕಣ್ ಸನ್ನೆ ನೋಟದ ಈ ಹುಡುಗಿಯ ಕತೆ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

1297

ಮಲಯಾಳಂ ಸಿನಿ ಲೋಕವು ಈಗಂತೂ ಹೆಚ್ಚು ಸದ್ದು ಮಾಡುತ್ತಿದ್ದು, ಎಲ್ಲಾ ಭಾಷಿಗರನ್ನು ತನ್ನಡೆಗೆ ಸೆಳೆಯುತ್ತಿದೆ. ಹೊಸ ಮಾದರಿಯ ಸಿನಿಮಾಗಳು ಮತ್ತು ಸಂಗತಿಗಳು ಮಲಯಾಳಂ ಸಿನಿ ಲೋಕವನ್ನು ಶ್ರೀಮಂತಗೊಳಿಸುತ್ತಿವೆ.ಇದಕ್ಕೆ ಕಾರಣಗಳು ಇವೆ…

ಹೌದು, ಒಂದೇ ಒಂದು ವಿಡಿಯೋ ಕ್ಲಿಪ್‌ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದು ಯಾವ ಮಟ್ಟಿಗೆ ಎಂದರೆ, ಕಣ್ ಸನ್ನೆ ಹುಡುಗಿ ಪ್ರಿಯಾ,ರಾತ್ರೋ ರಾತ್ರಿ ಸ್ಟಾರ್ ಆಗಿಬಿಟ್ಟಿದ್ದಾರೆ.ಈಗಂತೂ ಎಲ್ಲಿ ನೋಡಿದರೂ ಅದೊಂದೆ ವಿಡಿಯೋ. ಸಾಮಾಜಿಕ ಜಾಲತಾಣಗಳಲ್ಲಿ ಇದು ಪಡ್ಡೆ ಹುಡುಗರ ಫೇವರಿಟ್. ವಿಡಿಯೋದಲ್ಲಿ ಹಾಡಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿರೋದು ಅಭಿನಯಿಸಿರೋ ನಟರು ಹಾಗೂ ಈ ಹುಡುಗಿಯ ಕಣ್ ಸನ್ನೆಯ ನೋಟ.

ಈ ವಿಡಿಯೋ ಮಲಯಾಳಂನ ‘ಒರು ಆಡಾರ್ ಲವ್’ ಸಿನಿಮಾದ ಹಾಡೊಂದರ ಝಲಕ್. ಈ ಹಾಡು ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಫೇಮಸ್ ಆಗ್ಬಿಡ್ತು.ಇದಕ್ಕೆ ಕಾರಣ ಈ ಹಾಡಿನಲ್ಲಿ ನಟಿಸಿರುವ ನಟಿ ಪ್ರಿಯಾ ಪ್ರಕಾಶ್‌ ವಾರಿಯರ್‌ ಕಣ್ಣುಗಳು ನೋಟ ಎಂಥವರನ್ನು ಮಗ್ನಗೊಳಿಸುವಂತೆ ಮಾಡುತ್ತಿದೆ.  ಕಣ್ಣು ಹೊಡೆದು ಹುಡುಗರ ಹೃದಯಕ್ಕೆ ಲಗ್ಗೆ ಇಡುವ ಅವಳ ಮಾದಕತೆ ಪಡ್ಡೆಗಳ ನಿದ್ದೆ ಕೆಡಿಸಿದೆ.

 

ಪ್ರಿಯಾ ಪ್ರಕಾಶ್‌ ವಾರಿಯರ್‌’ನ ಕಣ್ ಸನ್ನೆಯ ನೋಟ ಫೇಸ್​ಬುಕ್​, ವಾಟ್ಸ್​ಆ್ಯಪ್​, ಇನ್​ಸ್ಟಾಗ್ರಾಮ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಇದು ಯ್ಯೂಟ್ಯೂಬ್ ನಲ್ಲಿ ನಂ.1 ಟ್ರೆಂಡಿಂಗ್ ನಲ್ಲಿದ್ದು ಕೇವಲ 20 ಗಂಟೆಗಳಲ್ಲಿ 1 ಮಿಲಿಯನ್ ಗೂ ಅಧಿಕ ಜನರು ವೀಕ್ಷಿಸಿದ್ದು 50,000 ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಸೆನ್ಸೇಷನ್ ಕ್ರಿಯೇಟ್ ಮಾಡಿ ಒಂದೇ ರಾತ್ರಿಲಿ ಇಷ್ಟೆಲ್ಲ ಫೇಮಸ್​ ಆಗಿರೋ ಈ ಹುಡುಗಿ ಹೆಸರು ಪ್ರಿಯಾ ಪ್ರಕಾಶ್ ವಾರಿಯರ್. ಇನ್ನೂ ಹದಿನೆಂಟು ವರ್ಷ ಹರೆಯದ ಸುರಸುಂದರಿ. ‘ಒರು ಆಡಾರ್ ಲವ್’ ಸಿನಿಮಾ ಮೂಲಕ ಮಲೆಯಾಳಂ  ಚಿತ್ರ ರಂಗಕ್ಕೆ ಪರಿಚಯವಾಗುತ್ತಿರೋ ಉದಯೋನ್ಮುಖ ನಟಿ.

ಅಂತೂ ಇನ್ನೂ ಚಿತ್ರರಂಗದಲ್ಲಿ ತನ್ನ ಮೊದಲ ಹೆಜ್ಜೆ ಇಡುತ್ತಿರುವ ಈಕೆ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಹದಿನೆಂಟು ವರ್ಷ ಹರೆಯದ ಸುರಸುಂದರಿ ಪ್ರಿಯಾ ಪ್ರಕಾಶ್‌ ವಾರಿಯರ್‌  ಕೇರಳದ ತ್ರಿಸೂರ್ ನಲ್ಲಿ ವಾಸವಾಗಿದ್ದು ಮೊದಲ ವರ್ಷದ ಬಿ.ಕಾಮ್ ವಿದ್ಯಾರ್ಥಿಯಾಗಿ ಓದುತ್ತಿದ್ದಾರೆ.

ನ್ಯಾಷನಲ್ ಕ್ರಶ್ ಆಗಿರೋ, ಕಣ್ ಸನ್ನೆ ಹುಡುಗಿಯ ಕಣ್ ನೋಟದ ವಿಡಿಯೋ ನಿಮಗಾಗಿ…

‘ಒರು ಆಡಾರ್ ಲವ್’ ಸಿನಿಮಾವನ್ನು ಮಲಯಾಳಂನ ನಿರ್ದೇಶಕ ಒಮರ್ ಲಾಲು ನಿರ್ದೇಶನ ಮಾಡುತ್ತಿದ್ದು ಮಾರ್ಚ್ 20ರಂದು ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.