ಜ್ಯೋತಿಷ್ಯ

ಇಂದು ಸೋಮುವಾರ, ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

234

ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮದೇ ಆದ ವಿಚಾರ ಲಹರಿ ಹಾಗೂ ಚಾತುರ‍್ಯಪೂರ್ಣ ಕೆಲಸಗಳ ವಿಧಾನದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಕೆಲಸ ವೃತ್ತಿಪರ ವರ್ತನೆ ನೀವು ಮೆಚ್ಚುಗೆ ತರುವ. ಇವತ್ತು ನೀವು ಶಾಪಿಂಗ್ ಹೋದಲ್ಲಿ ನಿಮಗಾಗಿ ಒಂದು ಒಳ್ಳೆಯ ಉಡುಗೆಯನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆಸ್ಪತ್ರೆಗೆ ಭೇಟಿ ನೀಡಬೇಕಾಗಬಹುದು.ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ.

 

ವೃಷಭ:-

ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

 

ಮಿಥುನ:

ಕುಟುಂಬದ ಸದಸ್ಯರ ಉತ್ತಮ ಸಲಹೆ ಇಂದು ನಿಮಗೆ ಲಾಭ ತರುತ್ತದೆ. ನೆನಪಿಡಿ. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳು ನಿಮಗೆ ಕೀರ್ತಿ ತರುವ  ಪ್ರಯತ್ನ ಮಾಡುವರು. ಒಟ್ಟಿನಲ್ಲಿ ಸಂತಸದ ಕ್ಷ ಣಗಳನ್ನು ಕಾಣುವಿರಿ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.

 

ಕಟಕ :-

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಪೋಷಕರ ಆರೋಗ್ಯ ಸುಧಾರಿಸುತ್ತದೆ. ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

 

 ಸಿಂಹ:

ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ.  ವಿವಿಧ ಮೂಲಗಳಿಂದ ಹರಿದು ಬರುವ ಹಣವು ನಿಮಗೆ ಆರ್ಥಿಕ ಸದೃಢತೆಯನ್ನು ತಂದುಕೊಡುವುದು. ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

ತುಲಾ:

ಹೇಳಿದ್ದನ್ನೆ ಮತ್ತೆ ಮತ್ತೆ ಹೇಳಿ ತಲೆ ತಿನ್ನುವ ಜನರು ನಿಮ್ಮನ್ನು ಭೇಟಿ ಆಗುವರು. ಹಾಗಾಗಿ ಮನಸ್ಸಿಗೆ ಸ್ವಲ್ಪ ಕಿರಿಕಿರಿ ಎನಿಸುವುದು. ಕೆಲವೊಮ್ಮೆ ಇದು ಅನಿವಾರ್ಯವೂ ಆಗಬಹುದು. ಶಿವನ ಆರಾಧನೆ ಮಾಡಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ :-

ವ್ಯವಹಾರದ ಜೊತೆ ಸಂತೋಷವನ್ನು ಬೆರೆಸಬೇಡಿ. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ   ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು

ಧನಸ್ಸು:

ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಅಗತ್ಯ ವಸ್ತುಗಳ ಖರೀದಿ.  ಪ್ರತಿನಿತ್ಯ ಆಂಜನೇಯ ಸ್ತೋತ್ರ ಪಠಿಸುವುದು ಕ್ಷೇಮ.

ಮಕರ :-

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ  ಉತ್ತಮವಾಗಿರುವುದು. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ.

ಕುಂಭ:-

ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರಕಲಿದೆ. ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ.  ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಮೀನ:-

ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು – ನಿಮ್ಮ ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ಮಕ್ಕಳು ಸ್ವಲ್ಪ ಕಿರಿಕಿರಿ ಮಾಡಿ ತಲೆ ತಿನ್ನುವ ವಿಚಾರಕ್ಕೆ ಮೈಪರಚಿಕೊಳ್ಳಬೇಕಾಗುವುದು. ಇತ್ತ ಜೋರಾಗಿ ಗದರಿಸುವಂತಿಲ್ಲ. ಇಲ್ಲವೆ ಅವರ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ರಾಜರಾಜೇಶ್ವರಿನಗರ ಮುನಿರತ್ನ VS ಪ್ರಜ್ವಲ್ ರೇವಣ್ಣ ನೀವು ಯಾರನ್ನ ಬೆಂಬಲಿಸುತ್ತೀರಾ..?

    ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಸುದ್ದಿ

    ಹುಟ್ಟುತ್ತಲೇ ದಾಖಲೆಯನ್ನ ನಿರ್ಮಿಸಿದ ಪುಟ್ಟ ಮಗು, ಮಗುವನ್ನ ನೋಡಿ ಶಾಕ್.

    ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…

  • ಸುದ್ದಿ

    ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

    ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…

  • ಸುದ್ದಿ

    11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

    ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…