ಸುದ್ದಿ

ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

805

ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಈ ರೀತಿಯ ಪ್ರಕರಣಗಳಿಗೆ ಪರಿಹಾರ ಎಲ್ಲಿದೆ..?

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ  ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಪಿಂಚಣಿಯೂ ನಿಂತು ಬಿಟ್ಟಿದೆ…

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.

ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್‌ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .

 

ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

    ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…