ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಹೋದವರ ಶರೀರಕ್ಕೆ ತಂಪು ನೀಡಿ ದೇಹದ ಸಮತೋಲನವನ್ನು ಕಾಪಾಡುತ್ತದೆ.ಯಾರೇ ಕುಡಿದರೂ ಯಾವುದೇ ಅಡ್ಡಪರಿಣಾಮಗಳಿಲ್ಲ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ, ಗಾಯಗೊಂಡ ಯೋಧರಿಗೆ ತುರ್ತು ಪ್ಲಾಸ್ಮಾ ನೀಡಿಕೆಗಾಗಿ ನೇರವಾಗಿ ಎಳನೀರನ್ನು ಸೇರಿಸುತ್ತಿದ್ದರೆಂಬುದು ಆಶ್ಚರ್ಯಕರವಾದರೂ ಸತ್ಯವಾಗಿದೆ.

ಆದ್ದರಿಂದ ಶಿಶುಗಳಲ್ಲಿ ಪಚನಕ್ರಿಯೆಗೆ ಯಾ ಕರುಳಿನ ಸಮಸ್ಯೆಗೆ ತುಂಬಾ ಪರಿಣಾಮಕಾರಿಯಾಗಿದೆ. ಎಳನೀರು ದಿಢೀರ್ ಚೇತೋಹಾರಿ ಮತ್ತು ಅತ್ಯಂತ ಶಕ್ತಿದಾಯಕವಾದ್ದರಿಂದ ಅಶಕ್ತರಿಗೆ ಹೊಸ ಚೈತನ್ಯವನ್ನು ತುಂಬುತ್ತದೆ ಮತ್ತು ಹಣ್ಣಿನ ರಸಗಳಿಗಿಂತಲೂ ಹೆಚ್ಚು ಆರೋಗ್ಯಕರವಾಗಿದೆ.ದಿನಪೂರ್ತಿ ಲವಲವಿಕೆಯಿಂದ ಕಾರ್ಯಮಗ್ನವಾಗಿರಲು ಉಪಯುಕ್ತ.ಸಂಪೂರ್ಣವಾಗಿ ಔಷಧೀಯ ಗುಣಧರ್ಮಗಳನ್ನು ಒಳಗೊಂಡಿರುವುದರಿಂದ ಎಳನೀರನ್ನು ನಿಯಮಿತವಾಗಿ ಬಳಸಬಹುದು.

ದೂರಪ್ರಯಾಣಿಸುವಾಗ ಎಳನೀರು ಕೆಡುವ ಭಯವಿಲ್ಲ, ಆದರೂ ಗೊಂಚಲಿನಿಂದ ಬೇರ್ಪಡಿಸಿದ 24 ರಿಂದ 48 ಗಂಟೆಗಳವರೆಗೆ ಮಾತ್ರ
ಅದರ ತಾಜಾತನವಿರುತ್ತದೆ. ನಂತರ ಫ್ರಿಜ್ನಲ್ಲಿ ಇರಿಸಿದರೂ ತಾಜಾತನ ನಾಶವಾಗುತ್ತದೆ. ಎಳನೀರು ಆಹ್ಲಾದಕರ ಪಾನೀಯ ಮತ್ತು ಒಂದು ಬಾಳೆ ಹಣ್ಣಿನಲ್ಲಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಪೊಟಾಷಿಯಂ ಒಳಗೊಂಡಿದೆ. ಎಳನೀರು ಕರುಳಿನ ಕಾರ್ಯವನ್ನು ಮತ್ತು ಪಚನಶಕ್ತಿಯನ್ನು
ಹೆಚ್ಚಿಸುತ್ತದೆ.

ಹೊಟ್ಟೆಯಲ್ಲಿರುವ ಕ್ರಿಮಿಗಳನ್ನು ನಾಶಮಾಡುತ್ತದೆ.ಎಳನೀರಿನಲ್ಲಿರುವ ಸಲೈನ್ ಮತ್ತು ಅಲ್ಬುಮಿನ್ ಕಾಲರಾ ರೋಗಕ್ಕೆ ಅತ್ಯುಪಯುಕ್ತ ಔಷಧಿ.ಖನಿಜ ವಿಷವನ್ನು ದೇಹದಿಂದ ಹೊರದಬ್ಬುತ್ತದೆ. ಎಳನೀರಿನ ಔಷಧೀಯ ಗುಣಗಳು-ಮೂತ್ರಮಲ ಮತ್ತು ಮೂತ್ರದಸೋಂಕನ್ನು ತಡೆಗಟ್ಟುವ ಗುಣ ಹೊಂದಿರುವ ಕಾರಣ ಕಿಡ್ನಿಕಲ್ಲುಗಳ ಸಂಭವವನ್ನು ಕಡಿಮೆ ಮಾಡುತ್ತದೆ. ಆಹ್ಲಾದ, ಶಕ್ತಿನೀಡವ ಪಾನೀಯಗಳಿಗಿಂತ ಕಡಿಮೆ ಸೋಡಿಯಂ ಹೊಂದಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ದೇಹದ ಜಲಾಂಶ ನಷ್ಟವಾಗುವಿಕೆಯನ್ನು ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…