ಕವಿ

ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

2025

ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.

 

ಜೀವನ:-

  • ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿಯಾಗಿ ಬಾಳಿ, ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು. ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು.
  • ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು! ಯಕ್ಷಗಾನ ತಂಡಗಳನ್ನು ಕಟ್ಟಿಕೊಂಡು ಶ ವಿದೇಶಗಳಲ್ಲಿ ಈ ಕಲೆಯನ್ನು ಪ್ರಚುರಪಡಿಸಲು ಯತ್ನಿಸಿದರು. ಮಕ್ಕಳಲ್ಲಿದ್ದ ಪ್ರತಿಭೆ ಅರಳಿಸಲು ಪುತ್ತೂರಿನಲ್ಲಿ ಬಾಲವನ ಎಂಬ ಅಸಂಪ್ರದಾ ಯಿಕ ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು. ಪುತ್ತೂರಿನಲ್ಲಿ ಒಂದು ಮುದ್ರಣಾಲಯ ತೆರೆದು, ತಮ್ಮ ಪುಸ್ತಕಗಳನ್ನು ಮುದ್ರಿಸುತ್ತಿದ್ದರಲ್ಲದೆ, ತಮ್ಮ ಹಲವು ಕಾದಂಬರಿಗಳಿಗೆ ತಾವೆ ಮುಖಪುಟದ ಚಿತ್ರಗಳನ್ನೂ ಬರೆದು ಮುದ್ರಿಸಿದ ಬಹುಮುಖ ಪ್ರತಿಭೆ ಇವರದ್ದು! ಬಹುಶಃ ಮುಖಪುಟ ಚಿತ್ರ ಬರೆದು ಪ್ರಕಟಿಸಿದ ಕನ್ನಡದ ಪ್ರಥಮ ಪ್ರಮುಖ ಸಾಹಿತಿ ಇವರೊಬ್ಬರೇ.

 

ಪರಿಸರ ಹೋರಾಟ:-

ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.

ಕಾದಂಬರಿಗಳು:-

  1. ಅದೇ ಊರು, ಅದೆ ಮರ
  2. ಅಳಿದ ಮೇಲೆ
  3. ಅಂಟಿದ ಅಪರಂಜಿ
  4. ಆಳ, ನಿರಾಳ
  5. ಇದ್ದರೂ ಚಿಂತೆ
  6. ಇನ್ನೊಂದೇ ದಾರಿ
  7. ಇಳೆಯೆಂಬ

ಕವನ ಸಂಕಲನಗಳು:-

  1. ರಾಷ್ಟ್ರಗೀತ ಸುಧಾಕರ
  2. ಸೀಳ್ಗವನಗಳು

ಸಣ್ಣ ಕತೆ:-

  • ಕವಿಕರ್ಮ
  • ತೆರೆಯ ಮರೆಯಲ್ಲಿ
  • ಹಸಿವು
  • ಹಾವು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

      ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….

  • ಆರೋಗ್ಯ

    ‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು