ಆರೋಗ್ಯ

ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

402

ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.

ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.

ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.

ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ: ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ನಲ್ಲಿಕಾಯಿ ಜ್ಯೂಸ್ ತಯಾರಿಸುವ ವಿಧಾನ:-

* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ.

* ಬ್ಲೆಂಡರ್‌ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿಅರೆಯಿರಿ.

* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರುಸಂಗ್ರಹಿಸಿ.

* ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.

*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.

” ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.

* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…