ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.
ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.
ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.
ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.
ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.
ಗ್ರೀನ್ ಟೀ ತಯಾರಿಸಿ ಫ್ರಿಡ್ಜ್ನಲ್ಲಿರಿಸಿ ಐಸ್ ಕ್ಯೂಬ್ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.
ನಿಂಬೆರಸದಲ್ಲಿ ಸಿಟ್ರಿಕ್ ಆಮ್ಲದ ಜೊತೆ ಆ್ಯಸ್ಕೂರ್ಬಿಕ್ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.
ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.
ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.
ಟೂತ್ಪೇಸ್ಟ್ನ ಬಿಳಿಭಾಗದಲ್ಲಿ ಬೇಕಿಂಗ್ ಸೋಡಾ ಹಾಗೂ ಹೈಡ್ರೋಜನ್ ಪೆರಾಕ್ಸೆ„ಡ್ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್ಪೇಸ್ಟ್ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.
1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…