ಜ್ಯೋತಿಷ್ಯ

ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

425

ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು

ವೃಷಭ:-

ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..

ಮಿಥುನ:

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

 

ಕಟಕ :-

ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.

 ಸಿಂಹ:

ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.

ಕನ್ಯಾ :-

ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ‌. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.

ತುಲಾ:

ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫ‌ಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.

ವೃಶ್ಚಿಕ :-

ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.

ಧನಸ್ಸು:

ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ :-

ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.

ಕುಂಭ:-

ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.

ಮೀನ:-

ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.