ಸ್ಪೂರ್ತಿ

ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

397

ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ ರೀತಿಯಲ್ಲಿ ಕೃಷಿ ಚಟುವಟಿಕೆಯ ಕೆಲಸವನ್ನು ಮಾಡುತ್ತಾರೆ ಈ ಲಕ್ಶ್ಮಿಬಾಯಿ.

ಲಕ್ಶ್ಮಿಬಾಯಿಯವರು ತಮ್ಮ ತವರುಮನೆಯ ಸೋರಗಾಂವಿ ಗ್ರಾಮದಿಂದ ದೇಶೀಯ ಬದನೆ ತಳಿಗಳನ್ನ ತಂದು ತಮ್ಮ ಗಂಡನ ಮನೆಯಲ್ಲಿ ಬೆಳೆಯುವ ಮೂಲಕ ಅದ್ಭುತ ಸಾಧನೆಯನ್ನ ಮಾಡಿದ್ದಾರೆ. ಇವರು ಬೆಳೆಯುವಂತ ದೇಶಿಯ ಬದನಕಾಯಿಗೆ ಉತ್ತಮ ಮಾರ್ಕೆಟಿಂಗ್ ಇದ್ದು ಸುತ್ತ ಮುತ್ತಲಿನ ರೈತರೆಲ್ಲರೂ ಇವರನ್ನು ನೋಡಿ ಪ್ರೇರೇಪಿತರಾಗಿದ್ದರೆ ಎನ್ನಲಾಗುತ್ತದೆ.

ಲಕ್ಷ್ಮೀಬಾಯಿಯವರ ನಿತ್ಯದ ಕಾಯಕ:-

ದಿನಾ ಬೆಳಗಾದರೆ ಸಾಕು ಎದ್ದು ದನಕರುಗಳಿಗೆ ನೀರು ಹಾಕೋದು, ಹೊಲಗದ್ದೆಗಳಲ್ಲಿ ಬದನೆಕಾಯಿಗಳ ಬೆಳೆ ನೋಡಿಕೊಳ್ಳೋದು ಮತ್ತು ದೇಶಿಯ ಬೀಜಗಳನ್ನ ಸಂರಕ್ಷಣೆ ಮಾಡೋದು ಹಾಗು ನಿತ್ಯವೂ ಕೃಷಿ ಕಾರ್ಯದಲ್ಲಿ ತೊಡಗುವಂತ ಕೆಲಸವನ್ನು ಮಾಡುತ್ತಾರೆ.

ಹೊಲದಲ್ಲಿ ಬದನೆಕಾಯಿ ಹೆಚ್ಚೋದು, ಬೆಳೆಗೆ ನೀರುಣಿಸೋದು, ಕಸ ಕೀಳೋದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿರುತ್ತಾರೆ. ಅಲ್ಲದೆ ಹೊಲದಲ್ಲಿ ಕೆಲ್ಸ ಮಾಡೋರನ್ನ ತಮ್ಮ ಮಕ್ಕಳಂತೆ ನೋಡಿಕೊಳ್ತಾರೆ.

ವಿಶೇಷ ಕಾಯಕ:-

ಲಕ್ಷ್ಮೀಬಾಯಿಯವರು ಬೀಜ ಬ್ಯಾಂಕ​ನ್ನು ತಮ್ಮ ಮನೆಯಲ್ಲಿ ಮಾಡಿಕೊಂಡಿದ್ದಾರೆ. ಬೇರೆ ಬೇರೆ ಜಾತಿಯ ದೇಶಿಯ ತಳಿಗಳ ಬೀಜಗಳನ್ನ ಮಣ್ಣಿನ ಮಡಿಕೆಗಳಲ್ಲಿಟ್ಟು ಸಂರಕ್ಷಿಸಿ ಇತರರಿಗೆ ಮಾದರಿಯಾಗಿದ್ದಾರೆ. ಇನ್ನು ಕೃಷಿ ಸಾಧನೆ ಮಾಡಿರೋ ಕುಟುಂಬದಲ್ಲಿ ಪತಿ ಮಲ್ಲಪ್ಪಗೆ ರಾಜ್ಯ ಪ್ರಶಸ್ತಿ, ಪುತ್ರ ರುದ್ರಪ್ಪಗೆ ಮಹಿಂದ್ರಾ ನ್ಯಾಷನಲ್ ಅವಾರ್ಡ, ಐಎಆರ್ಐ ಪ್ರಶಸ್ತಿಗಳು ಬಂದಿದ್ದು, ಇಡಿ ಕುಟುಂಬ ಕೃಷಿ ಸಾಧಕ ಕುಟುಂಬವಾಗಿ ಹೆಸರುವಾಸಿಯಾಗಿದೆ.

ಕಳೆದ ಹಲವು ವರ್ಷಗಳ ಸಾಧನೆ ಮತ್ತು ಬದನೆ ಸಂಶೋಧನೆಗಾಗಿ ನ್ಯೂ ದೆಹಲಿಯ ನ್ಯಾಷನಲ್​ ಇನೋವೇಷನ್​ ಪೌಂಡೇಶನ್ ವತಿಯಿಂದ ಪ್ರಶಸ್ತಿಗೂ ಭಾಜನರಾಗಿದ್ದು, ದೇಶಿಯ ತಳಿ ಸಂರಕ್ಷಣೆಗಾಗಿ 2015ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರಿಂದ ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…