ಉಪಯುಕ್ತ ಮಾಹಿತಿ

ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಮತ್ತು ಕೇಂದ್ರಸರ್ಕಾರದಿಂದ ಉಚಿತ ಗ್ಯಾಸ್ ಯೋಜನೆಗಳು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ…

946

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..

ಹೌದು ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಕ್ಕೆ ಒಟ್ಟು ಎರಡು ಯೋಜನೆಗಳಿವೆ..

ಒಂದು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ” 

ಇನ್ನೊಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ”

ಬಿ ಪಿ ಎಲ್ ಕಾರ್ಡ್ ಹೊಂದಿರುವವರು ಈ ಯೋಜನೆಗಳ ಮೂಲಕ ಉಚಿತ ಗ್ಯಾಸ್ ಕನೆಕ್ಷನ್ ಪಡೆಯಬಹುದಾಗಿದೆ..

ಹಾಗಾದ್ರೆ ಪ್ರಧಾನಮಂತ್ರಿ ಉಜ್ವಲ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗಳಿಂದ ಹೇಗೆ ಉಚಿತವಾಗಿ ಗ್ಯಾಸ್ ಪಡೆಯಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. 

ಪ್ರಧಾನ ಮಂತ್ರಿ ಉಜ್ವಲ ಯೋಜನೆ…

ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್‌ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್‌ಗಳಿಗೆ ಹಣ ನೀಡಬೇಕಾಗುತ್ತದೆ.ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…

ಅರ್ಹತೆ ಮಾನದಂಡ ಏನು..?

  • ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಹರಾಗಿದ್ದು, 18 ವರ್ಷ ಮೇಲ್ಪಟ್ಟಿರಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ನೀಡುವ ಬಿಪಿಎಲ್ ಕಾರ್ಡ್’ನ್ನು ಹೊದಿರಬೇಕು.

ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…

  • ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರು ಒಂದು ನಕಲು ಪ್ರತಿಯನ್ನು ಒದಗಿಸಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ . ಬಿಪಿಎಲ್ ಕಾರ್ಡ್’ನ್ನು ಒದಗಿಸಬೇಕು.
  • ಅಡ್ರೆಸ್ ಪ್ರೂಫ್’ಗಾಗಿ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
  • ಬ್ಯಾಂಕ್ ಅಕೌಂಟ್ ಇರಬೇಕು.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಹ ಕೊಡಬೇಕಾಗುತ್ತದೆ.

ಇಲ್ಲಿ ಓದಿ:-ಪ್ರಧಾನ “ಮಂತ್ರಿ ಆವಾಸ್ ಯೋಜನೆ” ಅಡಿಯಲ್ಲಿ ಸ್ವಂತ ಮನೆ ಪಡೆಯೋದು ಹೇಗೆ…

ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ..?

  • *  14.2 ಕೆಜಿ
  • *  ಗ್ಯಾಸ್ ಸ್ಟೋವ್,
  • *  ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.

ಪಡೆಯುವ ವಿಧಾನ ಹೇಗೆ…

ಹತ್ತಿರದ ಗ್ಯಾಸ್ ಏಜೆನ್ಸಿ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಕೊಡಬೇಕು.. 1 ತಿಂಗಳಲ್ಲಿ ಮನವಿ ಅಂಗೀಕಾರವಾಗಿ ಗ್ಯಾಸ್ ಏಜೆನ್ಸಿಯವರು 1600 ರೂಪಾಯಿ ಮೌಲ್ಯದ ಸಿಲಿಂಡರ್ ಹಾಗೂ ರೆಗ್ಯುಲೇಟರ್ ಅನ್ನು ಉಚಿತವಾಗಿ ನೀಡುತ್ತಾರೆ.. ಉಳಿದ ಗ್ಯಾಸ್ ಉಪಕರಣಗಳು ಬೇಕಿದ್ದರೆ ಹಣವನ್ನು ನೀಡಿ ಪಡೆದುಕೊಳ್ಳಬಹುದಾಗಿದೆ..

ಈಗ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಬಗ್ಗೆ ತಿಳಿಯೋಣ…

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಇದೇ ವರ್ಷದ ಡಿಸೆಂಬರ್‌ 1 2017 ರಿಂದ  ರಾಜ್ಯದಲ್ಲಿ ಜಾರಿಯಲ್ಲಿದೆ.

ಮೊದಲಿಗೆ ಅನಿಲ ಭಾಗ್ಯ ಯೋಜನೆಯನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಸಿಲಿಂಡರ್ ಪಡೆದ ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ವಿತರಿಸುವುದು ಎಂದಾಗಿತ್ತು.. ಆದರೆ ಆನಂತರ ಹೆಚ್ಚಿನ ಮಂದಿಗೆ ಇದರ ಉಪಯೋಗವಾಗುವುದಿಲ್ಲ ಎಂದು ಯೋಚಿಸಿ.. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಮೂಲಕ 15 ಲಕ್ಷ ಕುಟುಂಬ ಗಳಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ಕೊಡಲು ನಿರ್ಧರಿಸಿದ್ದಾರೆ..

ಅರ್ಜಿ ಸಲ್ಲಿಸುವುದು ಹೇಗೆ..?

ಬಿ ಪಿ ಎಲ್ ಕಾರ್ಡ್ ಹೊಂದಿರುವವರು ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೋಗಿ ಅರ್ಜಿ ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದಾಗಿದೆ..

ಉಚಿತ ಅನಿಲ ಭಾಗ್ಯ ಯೋಜನೆಯಲ್ಲಿ ಏನೆಲ್ಲಾ ಸಿಗಲಿದೆ..?

  • 14.2 ಕೆ ಜಿ ಸಿಲಿಂಡರ್,
  •  ಗ್ಯಾಸ್ ಸ್ಟವ್, ಹಾಗೂ
  • ರೆಗ್ಯುಲೇಟರ್
  • ಎರಡು ಬಾರಿ ಉಚಿತವಾಗಿ ಸಿಲಿಂಡರ್ ಅನ್ನು ಭರ್ತಿ ಮಾಡಿಕೊಡಲಾಗುತ್ತದೆ..

‘ಉಜ್ವಲ ಯೋಜನೆ’ ಹೊದಿರುವವರು ಇದಕ್ಕೆ ಅರ್ಹರಲ್ಲ…

ಇದಕ್ಕೆ ಮೊದಲು ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ  ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್‌ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ‍ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಈ ಯೋಜನೆಯಿಂದ ಸರ್ಕಾರ ಭಾರಿಸಲಿರುವ ವೆಚ್ಚ:-

ಈ ಯೋಜನೆಯಿಂದ ಸ್ಟೌವ್, ಕನೆಕ್ಟರ್ ಹಾಗೂ ಮೊದಲ ಎರಡು ಗ್ಯಾಸ್ ಸಿಲಿಂಡರ್ ಸರ್ಕಾರದ ಕಡೆಯಿಂದ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಸರ್ಕಾರಕ್ಕೆ ಪ್ರತಿ ಸಂಪರ್ಕಕ್ಕೆ 4,040 ರೂ. ವೆಚ್ಚ ತಗಲಿದೆ ಎಂದು ಹೇಳಲಾಗಿದೆ.ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 300 ಕೋಟಿ ರೂ. ವ್ಯಯಿಸಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಈ ಯೋಜನೆಯ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.. ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…