ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್ದೇಶಗಳಿಗೆ ನುಗ್ಗಿದ್ದಾರೆ.
ಅಧ್ಯಕ್ಷ ಬಷರ್ ಅಲ್
ಸಿರಿಯಾ ಬಂಡುಕೋರರು

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.
ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.
ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ ಫೇಸ್ಬುಕ್ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು