News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

618

ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

 

ಏಕೆ ಈ ಯುದ್ದ..?

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ಮಕ್ಕಳು ಮತ್ತು ಅಮಾಯಕ ಪ್ರಜೆಗಳ ಸಾವಿನ ಸಂಖ್ಯೆ…

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ  ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್‌ದೇಶಗಳಿಗೆ ನುಗ್ಗಿದ್ದಾರೆ.

ಸಾತ್ ಕೊಡ್ತಿರೋ ದೇಶಗಳು..

ಅಧ್ಯಕ್ಷ ಬಷರ್ ಅಲ್

  • ರಷ್ಯಾ
  • ಇರಾನ್
  • ಲೆಬನಾನ್

ಸಿರಿಯಾ ಬಂಡುಕೋರರು

  • ಸೌದಿ ಅರೇಬಿಯಾ
  • ಅಮೇರಿಕಾ
  • ಇಸ್ರೇಲ್

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.

ವಿಶ್ವ ಸಂಸ್ಥೆ ಮಾತಿಗೆ ಜಗ್ಗದ ಸಿರಿಯಾ ಸರ್ಕಾರ ಮತ್ತು ಬಂಡುಕೋರರು

ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.

ಜಗತ್ತಿಗೆ ಕಾಣುತ್ತಿಲ್ಲವೇ  ಮುಗ್ದ ಕಂದಮ್ಮಗಳ ಮಾರಣಹೋಮ…

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ  ಫೇಸ್‌ಬುಕ್‌ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.

ಸಿರಿಯಾದ ಮತ್ತಷ್ಟು ಭಯಾನಕ ಚಿತ್ರಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…