News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

974

ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

 

ವೃಷಭ:-

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

 

ಮಿಥುನ:

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

 

ಕಟಕ :-

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

 

 ಸಿಂಹ:

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

 

ಕನ್ಯಾ :-

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

 

ತುಲಾ:

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

 

ವೃಶ್ಚಿಕ :-

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

 

ಧನಸ್ಸು:

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ‌, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

 

ಮಕರ :-

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

 

ಕುಂಭ:-

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ಮೀನ:-

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.