ಆರೋಗ್ಯ

ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

1132

ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ  ಔಷಧ ತಯಾರಿಸ ಬಹುದು.

ಉಪ್ಪು ನೀರು :-

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.

ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ರಸ:-

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.

ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆ :-

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಲಿಂಬೆ ಹಣ್ಣು :-

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಉಪಯುಕ್ತ ಮಾಹಿತಿ, ಸುದ್ದಿ

    2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

    ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…