ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ ಔಷಧ ತಯಾರಿಸ ಬಹುದು.

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.
ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.
ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?