ಆರೋಗ್ಯ

ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

273

ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧಕ :

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.

ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್‌ಪ್ಯಾಕ್  ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ:

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್‌ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಮೆದುಳು ಆರೋಗ್ಯ ವರ್ಧನೆ :

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್‌ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಕೊಲೆಸ್ಟ್ರಾಲ್ ನಿಯಂತ್ರಣ :

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್‌ಗಳು-ಎಚ್‌ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್‌ಗಳು-ಎಲ್‌ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್‌ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಮೂಳೆ ಆರೋಗ್ಯ ರಕ್ಷಣೆ :

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್‌ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಮಲಬದ್ಧತೆ ನಿವಾರಣೆ :

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್‌ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…