ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..
ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.




ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….