ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2383

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…