News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2408

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ರಾಜಕೀಯ

    ಗಣಿ ಧಣಿಗಳ ಬಳ್ಳಾರಿ ನೆಲದಲ್ಲಿ, ಕಾಂಗ್ರೆಸ್ ನ ಉಗ್ರಪ್ಪಗೆ ಗೆಲವು..!ಗೆದ್ದಿದ್ದು ಎಷ್ಟು ಮತಗಳಿಂದ ಗೊತ್ತಾ..?

    ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…