ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2314

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು  ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading