ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2261

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…