ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.
ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.
ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.
ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.
“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್” ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.
ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್ ವಿಷ್ಣುವಿನ ಮಂತ್ರ :-
ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.
ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.
ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..