News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

276

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ದೇಶವನ್ನು ನಡೆಸುವ ಪ್ರಮುಖ ವ್ಯಕ್ತಿಗಳ ತಿಂಗಳ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…