ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

562

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ಕಾನೂನು

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮಾಡಿರುವ ಯೋಜನೆ ‘ಸುಕನ್ಯಾ ಸಮೃದ್ಧಿ’ …!ತಿಳಿಯಲು ಈ ಲೇಖನ ಓದಿ ..

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.