News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

577

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಉಪಯುಕ್ತ ಮಾಹಿತಿ

    ಈ ಜಾಗಗಳಲ್ಲಿ ಮೊಬೈಲ್ ಫೋನ್ ಗಳನ್ನು ಇಟ್ಟು ಕೊಳ್ಳಲೇಬೇಡಿ…

    ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…

  • ಸುದ್ದಿ

    ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

    ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…

  • ಸಂಬಂಧ

    ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

    ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…