ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…