ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.
ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಮಿತ್ರರೊಡನೆ ವಿರಸವಾದೀತು. ವೃತ್ತಿರಂಗದಲ್ಲಿ ಮುನ್ನಡೆ ಇರುತ್ತದೆ. ತಪ್ಪು ಹೆಜ್ಜೆಯಿಂದ ಕಾರ್ಯವಿಳಂಬವಾದೀತು.
ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು. ಕುಟುಂಬದ ಸದಸ್ಯರ ಬಗ್ಗೆ ಜಾಗ್ರತೆ ಇರಲಿ. ವಧುವರರಿಗೆ ಕಂಕಣಭಾಗ್ಯವೊದಗೀತು. ಆಗಾಗ ದೇಹಾರೋಗ್ಯದಲ್ಲಿ ಏರುಪೇರಾಗುತ್ತದೆ. ಕೋರ್ಟು ಕಚೇರಿ ಭಾಗದಲ್ಲಿ ಹೆಚ್ಚಿನ ಧನವ್ಯಯವಾದೀತು.
ಅಸಹನೆ-ದುರಾಸೆಗೆ ಕಾರಣರಾಗದಿರಿ. ಸಂತಾನ ಸಂಬಂಧ ದುಃಖವಾದೀತು. ಕಚೇರಿಯಲ್ಲಿ ಅಧಿಕಾರಿ ವರ್ಗದವರು ಧರ್ಮಬಾಹಿರ ಕಾರ್ಯವನ್ನು ಮಾಡಲಿದ್ದಾರೆ. ಜಾಗ್ರತೆ ವಹಿಸಿರಿ. ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಹೊಸ ಚಿಂತನೆಗೆ ಸಾಧ್ಯತೆ ಇರುತ್ತದೆ. ಆದರೂ ದುಡುಕದೆ ಮುಂದುವರಿಯಬೇಕು. ಕಾರ್ಯಭಾರದಿಂದ ದೇಹಾಯಾಸಕ್ಕೆ ಕಾರಣರಾಗದಂತೆ ಜಾಗ್ರತೆ ವಹಿಸಬೇಕು. ಶುಭಕಾರ್ಯಗಳಿಗೆ ಓಡಾಟ ಒದಗಿ ಬರಲಿದೆ.
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು. ಬಲವನ್ನು ಮುಂದುವರಿಸಬೇಕು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರಯತ್ನ
ಶ್ರೀದೇವತಾ ದರ್ಶನ ಭಾಗ್ಯದಿಂದ ಶಾಂತಿ ಸಮಾಧಾನ ಸಿಗಲಿದೆ. ಆಗಾಗ ಮಾನಸಿಕ ಅಸ್ಥಿರತೆ ಕಾಡಬಹದು. ಸಮಾಧಾನ ಚಿತ್ತರಾಗಿ ಮುಂದುವರಿಯಬೇಕಾಗು ತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಬಲದಿಂದ ಮುಂದುವರಿಸಿದಲ್ಲಿ ಕಾರ್ಯಸಾಧನೆ. ಕಂಟ್ರಾಕ್ಟ್ ವೃತ್ತಿಯವರಿಗೆ ಲಾಭ ತಂದೀತು. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ಕೆಲಸಕಾರ್ಯಗಳನ್ನು ಪ್ರಯತ್ನ
ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ದೇವತಾರಾಧನೆಯ ಚಿಂತನೆ ನಡೆಯಲಿದೆ. ನಿಂತು ಹೋದ ಕೆಲಸಕಾರ್ಯಗಳು ಪುನಃ ಚಾಲನೆಗೆ ಬರಲಿವೆ. ಧನಾಗಮನದಲ್ಲಿ ಅಭಿವೃದ್ಧಿ ತೋರಿ ಬಂದು ಕಾರ್ಯಸಾಧನೆಗೆ ಅನುಕೂಲ. ಮುಂದುವರಿಯಿರಿ.
ಆದಾಯ ವೃದ್ಧಿಯಾದರೂ ಜಾಗ್ರತೆಯಿಂದ ಖರ್ಚು ಮಾಡಬೇಕು. ವಾಸ ಸ್ಥಳದ ಬದಲಾವಣೆ ಇರುತ್ತದೆ. ಆದರೂ ವಿಘ್ನಗಳು ತೊಂದರೆಗಳು ಬರುತ್ತಾ ಇರುತ್ತವೆ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ಔದ್ಯೋಗಿಕ ಆರ್ಥಿಕ ಅಭಿವೃದ್ಧಿ ಇರುತ್ತದೆ. ಧನವ್ಯಯವಾದರೂ ಆಗಾಗ ಧನಾಗಮನ ಇರುತ್ತದೆ. ಶುಭಮಂಗಲ ಕಾರ್ಯಗಳ ಪ್ರಸ್ತಾವಗಳು ನಡೆಯಲಿವೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.
ವೃತ್ತಿರಂಗದಲ್ಲಿ ಏರುಪೇರು ತೋರಿ ಬಂದರೂ ಛಲದಿಂದ ಮುಂದುವರಿಯಬೇಕು. ಸಾಂಸಾರಿಕವಾಗಿ ಮನದನ್ನೆಯ ಸಹಕಾರ ಇರುತ್ತದೆ. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಅಚ್ಚರಿಯ ವಾರ್ತೆ. ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…