ಕರ್ನಾಟಕದ ಸಾಧಕರು

ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

257

ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ವಿದ್ಯಾಭ್ಯಾಸ

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆ ಅಂತರಾಷ್ಟ್ರೀಯ ಮಟ್ಟದಲ್ಲಿ…

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್‍ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ನಿನ್ನ ಪೂಜೆಗೆ ಬಂದೆ ಮಾದೇಶ್ವರಾ…

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಭರತನಾಟ್ಯ ಪ್ರವೀಣ…

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.

ಒಬ್ಬ ಆಧುನಿಕ ಶೈಲಿಯ ಗಾಯಕ ಗೇಲಿ ಮಾಡಿದ್ದೇ ಇವತ್ತಿನ ಯಶಸ್ಸಿಗೆ ಕಾರಣ…

ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್‌ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.

ವಿದೇಶದ ಒಂದು ಸನ್ನಿವೇಶ

ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು  ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ದಿ ರಘು ದೀಕ್ಷಿತ್ ಪ್ರಾಜೆಕ್ಟ್

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

ಅವರ ಮೊದಲ ಆಲ್ಬಮ್

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್‌ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.

ಕೃಪೆ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…