ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.
ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.
ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.