ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.
ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.
ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…