ಜ್ಯೋತಿಷ್ಯ

ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

506

ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.

ವೃಷಭ:-

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.

ಮಿಥುನ:

ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.

 

ಕಟಕ :-

ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.

 

 

 ಸಿಂಹ:

ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.

ಕನ್ಯಾ :-

ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.

 

ತುಲಾ:

ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.

ವೃಶ್ಚಿಕ :-

ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.

 

ಧನಸ್ಸು:

ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.

ಮಕರ :-

ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.

 

ಕುಂಭ:-

ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.

ಮೀನ:-

ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…