ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

2428

ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..


ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672

ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’


ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672

ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.

ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.

ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.

ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.

ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..

ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…