ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.
*ಬೇಕಾಗುವುದು ಆಧಾರ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ. ಆಧಾರ್ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.
*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.
*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.
*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್ ಪಡೆಯಬಹುದು.
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.
60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.