ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.
ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…
ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.
ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.
ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.
ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.
ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.
ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.
ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.
ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.
ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.
ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!
ಕೃಪೆ : ಶ್ರೀದರ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…