ಶಿಕ್ಷಣ

ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

2627

ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳ ಪಟ್ಟಿ :-

1) ಪ್ರಾಚೀನ ಭಾರತದ ಇತಿಹಾಸ – ಭಾರತ ಸರ್ಕಾರದ ಪ್ರಚಾರ ವಿಭಾಗ

2) ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಸಮಗ್ರ ಇತಿಹಾಸ – ಎಚ್.ಎನ್.ಬಸವರಾಜ

3) ಸಮಗ್ರ ಭಾರತದ ಇತಿಹಾಸ – ಡಾ|| ಕೆ.ಸದಾಶಿವ

4) ಕರ್ನಾಟಕ ಪರಂಪರೆ ಭಾಗ -೧

5) ಕರ್ನಾಟಕ ಪರಂಪರೆ ಭಾಗ -೨ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಪ್ರಕಟಿತ)

6) ಸ್ವತಂತ್ರ ಭಾರತ -1942 ರಿಂದ 2010 – ಪಾಲಾಕ್ಷ

7) ಆಧುನಿಕ ಭಾರತದ ಇತಿಹಾಸ – ಲೇ : ಕೆ.ನಾರಾಯಣ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)

8) ಕರ್ನಾಟಕ ಇತಿಹಾಸ – ಕೆ.ನಾರಾಯಣ

9) ಸ್ವತಂತ್ರ ಭಾರತ – ಕೆ.ನಾರಾಯಣ

10) ಕರ್ನಾಟಕ ಇತಿಹಾಸ – ಕ್ರಿ.ಶ. 1800-1956

11) ನಮ್ಮ ನಾಡು ಕರ್ನಾಟಕ – ಎಚ್.ಎಸ್.ಗೋಪಾಲರಾವ್12 ಸಮಗ್ರ ಕರ್ನಾಟಕ – ಪಾಲಾಕ್ಷ

13) ಕರ್ನಾಟಕ ಪ್ರವಾಸಿ ತಾಣಗಳು – ಶೇಷುನಾಥನ್ (ಸಾಧನಾ ಪ್ರಕಾಶನ ಬೆಂಗಳೂರು)

14) ಕರ್ನಾಟಕ ಕೈಗನ್ನಡಿ – ಸೂರ್ಯನಾಥ ಕಾಮತ್

15) ಪೂರ್ವ ಇತಿಹಾಸ – ಇರ್ಫಾನ್ ಹಬೀಬ್ (ಚಿಂತನ ಪ್ರಕಾಶನ, ಶಿರಸಿ)

16) ಸಾಮಾನ್ಯ ಭಾರತದ ಅರ್ಥಶಾಸ್ತ್ರ – ನೇ.ತಿ. ಸೋಮಶೇಖರ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)

17) ಭಾರತ ಸಂವಿಧಾನ – ಯಡಿಯೂರಪ್ಪ ತುಮಕೂರು

18) ಭಾರತ ಸಂವಿಧಾನ ಮತ್ತು ರಾಜಕೀಯ – ಎಚ್.ಎಮ್. ರಾಜಶೇಖರ

19) ನಮ್ಮ ನ್ಯಾಯಾಂಗ – ಬಿ.ಆರ್.ಅಗರವಾಲ್

20) ನಮ್ಮ ಸಂಸತ್ತು – ಸುಭಾಶ ಕಶ್ಯಪ್

21) ಭಾರತದ ಆರ್ಥಿಕ ಭೂಗೋಳಶಾಸ್ತ್ರ – ಪಿ.ಮಲ್ಲಪ್ಪ

22) ಭಾರತದ ಪ್ರಾದೇಶಿಕ ಮತ್ತು ಆರ್ಥಿಕ ಭೂಗೋಳಶಾಸ್ತ್ರ – ರಂಗನಾಥ

23) ಭೂಗೋಳ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ

24) ಇತಿಹಾಸ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ

25) ಕರ್ನಾಟಕ ವಿಶ್ವಕೋಶ ಭಾಗ -1

26) ಕರ್ನಾಟಕ ವಿಶ್ವಕೋಶ ಭಾಗ -2ಮೈಸೂರು ವಿಶ್ವವಿದ್ಯಾಲಯ

27) ಭಾರತದ ಆರ್ಥಿಕ ವ್ಯವಸ್ಥೆ – ಎಚ್.ಆರ್. ಕೃಷ್ಣೇಗೌಡ

28) ಕರ್ನಾಟಕದ ಆರ್ಥಿಕತೆ – ನೀ.ತಿ.ಸೋಮಶೇಖರ

29) ಕರ್ನಾಟಕ ಭೂಗೋಳ – ಪಿ.ಮಲ್ಲಪ್ಪ

30) ವಿಜ್ಞಾನ ಕಲಿಯೋಣ ಭಾಗ -1,2,3,4 – ಸಿ.ಎನ್.ಆರ್.ರಾವ್ ಮತ್ತು ಇಂದುಮತಿ ರಾವ್ – ನ್ಯಾಷನಲ್ ಬುಕ್ ಟ್ರಸ್ಟ್

31) ಜ್ಞಾನ ವಿಜ್ಞಾನ ಕೋಶ – ನವಕರ್ನಾಟಕ ಪ್ರಕಾಶನ

32) ನವಕರ್ನಾಟಕ ವಿಜ್ಞಾನ ಮಾಲಿಕೆಗಳು – 14 ಸರಣಿ

33) ಇದು ನಮ್ಮ ಕರ್ನಾಟಕ – ಚಾಣಕ್ಯ ಪ್ರಕಾಶನ

34) ಕನ್ನಡ ಕನ್ನಡಿಗ ಕರ್ನಾಟಕ – ಎಂ.ಚಿದಾನಂದ ಮೂರ್ತಿ

(dont buy all books, see the syllabus and according to that buy which ever you want)

Also refer:-                                                                                                  

NCRET and DCRET text books internet/web portals,

Kannada & English news papers,

Manorama, Indian year books, etc… yojana,

chronicle like magazines, some notes prepared by coaching institutes

 

2017ನೆ ಸಾಲಿನ ಕೆ.ಎ.ಎಸ್.(KAS) ಟಾಪರ್ ಐಶ್ವರ್ಯ ರವರ ಸಂಗ್ರಹ ಚಿತ್ರ.

ಕೆ.ಎ.ಎಸ್.(KAS) ಪರೀಕ್ಷೆಯ ತಯಾರಿಗಾಗಿ ಅಭ್ಯರ್ಥಿಯಲ್ಲಿ ಈ ಕೆಳಗಿನ ಗುಣಗಳು ಇರಬೇಕು :-

* ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು.

* ಪರೀಕ್ಷೆ ತಯಾರಿ ಮಾಡುವುದು ಬೇರೆ. ಅದರಲ್ಲಿ ಇಳಿಯುವುದು ಬೇರೆ. ಇಲ್ಲಿ ಪರೀಕ್ಷೆಗಾಗಿ ಆಳವಾದ ಅಧ್ಯಯನ ಮಾಡಬೇಕು. ಸಮುದ್ರ ಮೇಲ್ಗಡೆ ತೆರೆಗಳು ಹೆಚ್ಚಾಗಿ ಇರುವುವು. ಆದರೆ ಒಳಗೆ ಹೋದಂತೆ ಅಲ್ಲಿ ಪ್ರಶಾಂತತೆ ಇರುವುದು. ಅದೇ ರೀತಿ ಮೇಲ್ನೋಟಕ್ಕೆ ತಯಾರಿ ನಡೆಸಿದಾಗ ಮೈಂಡ್ ಡಿಸ್ಟರ್ಬ್ ಜಾಸ್ತಿ ಇರುವುದು. ಅದರಲ್ಲಿ ಆಳವಾಗಿ ತೊಡಗಿದಾಗ ನಮ್ಮ ಓದಿಗೆ ಡಿಸ್ಟರ್ಬ್ ಕಡಿಮೆಯಾಗುವುದು.

* ಪರೀಕ್ಷೆಗಾಗಿ ನಿಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಾಗ, ಅದರಿಂದ ಹೊರಗೆ ಬರಬಾರದು. ಅದನ್ನು ದೃಢತೆ ಎನ್ನುವರು. ದೃಢವಾದ ಮನಸ್ಸು ಇಟ್ಟು ತಯಾರಿ ನಡೆಸಬೇಕು. ಕೆಲವರು ಕೆ.ಎ.ಎಸ್. ಪರೀಕ್ಷೆಗಾಗಿ ಪೂರ್ಣ ತಯಾರಿ ನಡೆಸಿದ್ದಾಗ, ಇನ್ನೊಂದು ಪರೀಕ್ಷೆ ಕಾಲ್ ಫಾರ್ಂ ಆದ ಕೂಡಲೇ ಕೆ.ಎ.ಎಸ್. ಅಲ್ಲೇ ಬಿಟ್ಟು ಇನ್ನೊಂದು ಪರೀಕ್ಷೆಗೂ ತಯಾರಿ ನಡೆಸುತ್ತಾರೆ. ಅದನ್ನು ಪೂರ್ಣಗೊಳಿಸದೆ, ಮತ್ತೊಂದು ಪರೀಕ್ಷೆಗೆ ಜಿಗಿಯುತ್ತಾರೆ. ಇಂಥವರು ಯಾವ ಪರೀಕ್ಷೆಯಲ್ಲಿಯೂ ಯಶಸ್ವಿಯಾಗುವುದಿಲ್ಲ.

* ಇಂಥ ಪರೀಕ್ಷೆ ತಯಾರಿ ನಡೆಸಿದಾಗ ನಿಮ್ಮ ಮನಸ್ಸನ್ನು ಆಕರ್ಷಣೆಯಿಂದ ದೂರ ಇಡಬೇಕು. ಆಕರ್ಷಣೆಗೆ ಒಳಗಾಗಿ ಓದುತ್ತಾ ಇದ್ದಾಗ ಅಭ್ಯಾಸ ಪರಿಪೂರ್ಣವಾಗುವುದಿಲ್ಲ. ಮುಗ್ಧ ಮನಸ್ಸು ಏಕಾಗ್ರತೆಗೊಳ್ಳುವುದಿಲ್ಲ. ಯಾವುದೋ ಭಾವಲೋಕದಲ್ಲಿ ಓದುತ್ತಾ ಇರುವುವರು ಅವರು ಎಷ್ಟೇ ಗಂಟೆ ಓದಿದರೂ ಕೂಡಾ, ತಾವು ಯಾವುದು ಓದಿದ್ದು ಎಂಬುದು ಗೊತ್ತಿರುವುದಿಲ್ಲ.

* ಈ ಪರೀಕ್ಷೆಗೆ ಏಷ್ಟು ಗಂಟೆ ತಯಾರಿ ನಡೆಸಬೇಕು ಎಂಬ ಪ್ರಶ್ನೆ ಬಹಳಷ್ಟು ಅಭ್ಯರ್ಥಿಗಳ ಪ್ರಶ್ನೆಯಾಗಿದೆ. ನನ್ನ ಪ್ರಕಾರ ಕನಿಷ್ಠ 12 ರಿಂದ 14ತಾಸು ಓದಬೇಕು. ಕೆಲವರಿಗೆ ಗಾಬರಿಯಾಗಬಹುದು. ಇದಕ್ಕಿಂತ ಕಡಿಮೆ ಅವಧಿಯನ್ನು ತೆಗೆದುಕೊಂಡರೆ, ವಿಷಯವನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲವೆನೋ ಎಂದು ಕೆಲವರು ಹೇಳುವ ಪ್ರಕಾರ ಎಷ್ಟು ಗಂಟೆ ಓದುವುದು ಮುಖ್ಯವಲ್ಲ ಎಷ್ಟು ವಿಷಯ ತಿಳಿದುಕೊಂಡೆವು ಎಂಬುವುದು ಮುಖ್ಯವಾಗುತ್ತದೆ. ಆದರೆ, ಅಧ್ಯಯನಕ್ಕೆ ಕೂಡುವ ಅವಧಿ ಹೆಚ್ಚಿದಂತೆ, ಸಹಜವಾಗಿ ಏಕಾಗ್ರತೆ ಹಾಗೂ ಅರ್ಥ ಮಾಡಿಕೊಳ್ಳುವುದು.

* ಸಾಮಾನ್ಯವಾಗಿ ಯಾವ ಸಮಯದಲ್ಲಿ ಓದಬೇಕು ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ಇಲ್ಲಿ ಯಾವ ಸಮಯದಲ್ಲಿ ಓದುತ್ತೇನೆ ಎಂಬುದು ಮುಖ್ಯವಲ್ಲ. ಯಾವುದೇ ಸಮಯದಲ್ಲಿ ಓದಿ ಆದರೆ, ಮನಸ್ಸು ಕೊಟ್ಟು ಅಧ್ಯಯನ ಮಾಡಿ. ಸಾಮಾನ್ಯವಾಗಿ ಇಂಥ ಪರೀಕ್ಷೆಗೆ ತಯಾರಿ ನಡೆಸುವವರು ರಾತ್ರಿಯೇ ಹೆಚ್ಚು ಅಧ್ಯಯನ ಮಾಡುತ್ತಾರೆ.

* ಈ ಪರೀಕ್ಷೆಗೆ ವಿಶೇಷ ತಯಾರಿ ಹಾಗೂ ಪರಿಶ್ರಮ ಬೇಕಾಗುವುದು. ಅದಕ್ಕಾಗಿ ಸಹನೆ ಇರಬೇಕು. ನಿರಂತರ ಓದುತ್ತಾ ಇದ್ದಾಗ, ಅದನ್ನು ಬಿಟ್ಟು ಓಡಿಹೋಗೋಣ ಎಂಬ ಮನಸ್ಸು ಬರುತ್ತದೆ. ಕೆಲವರು 11ಹೆಜ್ಜೆವರೆಗೆ ಬಂದಿರುತ್ತಾರೆ. ಇನ್ನೊಂದು ಹೆಜ್ಜೆ ಇಟ್ಟರೆ, ಗುರಿ ಮುಟ್ಟಲು ಸಾಧ್ಯವಿರುತ್ತದೆ. ಅದನ್ನು ಗುರ್ತಿಸದೆ, ಸಹನೆ ಕಳೆದುಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಾರೆ. ಓಡಿ ಹೋಗುತ್ತಾರೆ.

* ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಗೆ ತಯಾರಿ ಮಾಡುವಾಗ ನಮ್ಮ ಓದು ಎಷ್ಟು ಮುಖ್ಯವಾಗಿರುತ್ತದೆ. ಅಷ್ಟೇ ಮುಖ್ಯ ನಮಗೆ ಪ್ರೇರಣೆ ಹಾಗೂ ಸ್ಫೂರ್ತಿ. ಅದಕ್ಕಾಗಿ ಈಗಾಗಲೇ ಯಶಸ್ವಿಯಾದವರ ಸಂದರ್ಶನ ಓದಿ ಹಾಗೂ ಕೆ.ಎ.ಎಸ್. ಪರೀಕ್ಷೆಗೆ ಸಂಬಂಧಪಟ್ಟ ಸೆಮಿನಾರ್‌ಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮ ಮನಸ್ಸು ಗಟ್ಟಿಯಾಗುತ್ತದೆ. ನಮ್ಮ ಸ್ಪರ್ಧಾ ಚಾಣಕ್ಯ ಪತ್ರಿಕೆಯಲ್ಲಿ ಪ್ರತಿ ತಿಂಗಳು ಸಾಧಕರ ಬಗ್ಗೆ ಪ್ರಕಟಿಸಿದ್ದೇವೆ. ಒಮ್ಮೆ ಓದಿ ನೋಡಿ. ಸಾಧಿಸಲು ಅವರು ತೆಗೆದುಕೊಂಡ ಸಮಯ, ಯಶಸ್ಸಿಗಾಗಿ ಪಟ್ಟ ಪರಿಶ್ರಮ ಎಲ್ಲವೂ ಗೊತ್ತಾಗುತ್ತದೆ.

* ಓದುವಾಗ ಯಾವುದೇ ವಿಷಯ ತಿಳಿಯದಿದ್ದಾಗ ಗಾಬರಿಯಾಬೇಡಿ. ಎಲ್ಲರಿಗೂ ಎಲ್ಲಾ ವಿಷಯ ಗೊತ್ತಿರುವುದಿಲ್ಲ. ಯಾಕೆಂದರೆ ಯಾರೂ ಇಲ್ಲಿಯವರೆಗೆ 100ಕ್ಕೆ 100ಅಂಕಗಳನ್ನು ತೆಗೆದುಕೊಂಡ ಉದಾಹರಣೆ ಇಲ್ಲ. ಕೆಲವರು ಒಂದೂ ಪ್ರಶ್ನೆ ಬರದಿದ್ದಾಗ ನಾನು ದಡ್ಡನೆಂಬ ಭಾವನೆ ಬೆಳೆಸಿಕೊಂಡು ಉತ್ಸಾಹ ಕಳೆದುಕೊಳ್ಳುತ್ತಾರೆ.

* ಕೆಲವರಿಗೆ ಈ ಪರೀಕ್ಷೆ ಎಂದರೆ ಪುಸ್ತಕಗಳನ್ನು ಸಂಗ್ರಹಿಸುವುದು ಎಂದು ತಿಳಿದುಕೊಂಡು ಎಲ್ಲಾ ಪುಸ್ತಕಗಳನ್ನು ಖರೀದಿಸುತ್ತಾರೆ. ಆದರೆ, ಯವುದನ್ನು ಪೂರ್ಣವಾಗಿ ಓದುವುದಿಲ್ಲ. ಉತ್ತಮ ಪುಸ್ತಕಗಳು ಇದ್ದರೆ ಸಾಕು. ಮುಂದಿನ ಸಂಚಿಕೆಯಲ್ಲಿ ಕೆ.ಎ.ಎಸ್. ಪರೀಕ್ಷೆ ತಯಾರಿಗೆ ಇರುವ ಉತ್ತಮ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸುತ್ತೇವೆ.

* ಉನ್ನತ ಪರೀಕ್ಷೆ ಬರೆಯಬೇಕಾದರೆ ಅಧ್ಯಯನದ ಕೊಠಡಿಯು ಕೂಡ ಅಷ್ಟೇ ಉತ್ತಮವಾಗಿರಬೇಕು. ಅಲ್ಲಿಯ ವಾತಾವರಣ ಬಹಳ ಚೆನ್ನಾಗಿರಬೇಕು. ಒಂದು ವೇಳೆ ನೀವು ಇರುವ ರೂಮಿನಲ್ಲಿ ಎಲ್ಲರೂ ಕೆ.ಎ.ಎಸ್. ಆಕಾಂಕ್ಷಿಗಳು ಇದ್ದರೆ ಚೆಂದ. ಬೇರೆ ಪರೀಕ್ಷೆಗೆ ತಯರಾಗುವವರ ಜೊತೆ ಇರಬಾರದು. ಯಾಕೆಂದರೆ, ನಿಮ್ಮದೇ ಕೆ.ಎ.ಎಸ್. ವಾತಾವರಣ ಇರುವುದಿಲ್ಲ. ಹಾಗೂ ಸ್ಫೂರ್ತಿ ಉಂಟಾಗುವುದಿಲ್ಲ.

* ಬೇರೆಯವರು ಓದುವುದನ್ನು ನೋಡಿ, ಅವರ ಪುಸ್ತಕಗಳ ಸಂಗ್ರಹ ನೋಡಿ, ಅವರ ಚರ್ಚೆಯನ್ನು ನೋಡಿ ನೀವು ಗಾಬರಿಯಾಗಬೇಡಿ. ಯಾವತ್ತೂ ಮತ್ತೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಓದುವಾಗ ನಿಮ್ಮದೇ ಶೈಲಿ ರೂಢಿಸಿಕೊಂಡು ಓದಬೇಕು.

* ಓದುವಾಗ ಮುಖ್ಯವಾದ ವಿಷಯಗಳನ್ನು ಕುರಿತು ನಿಮ್ಮದೇ ಆದ ನೋಟ್ಸ್ ಮಾಡಿಕೊಳ್ಳುವುದು ಉತ್ತಮ. ಸಮಯ ಇರದಿದ್ದಾಗ ಮಾತ್ರ ಪುಸ್ತಕದಲ್ಲಿ ಅಂಡರಲೈನ್ ಮಾಡಿಕೊಳ್ಳಿ. ಇದರಿಂದ ವೇಗವಾಗಿ ಪುನರ್ ಅಧ್ಯಯನ ಮಾಡಲು ಹಾಗೂ ನೆನಪಿಟ್ಟುಕೊಳ್ಳಲು ಸುಲಭವಾಗುತ್ತದೆ.

* ಇದಕ್ಕಾಗಿ ಗೆಳೆಯರ ಗುಂಪು ಮಾಡಿಕೊಳ್ಳಿ. ಯಾವುದೇ ಕಾರಣಕ್ಕೂ ಏಕಾಂಗಿ ಓದಬೇಡಿ. ಗುಂಪು ಚರ್ಚೆ ಮಾಡುವಾಗ ಹೊಸ ಹೊಸ ವಿಷಯ ತಿಳಿಯುವುದು ಅಲ್ಲದೆ ಚರ್ಚೆ ಮಾಡಿದ ವಿಷಯವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ.

* ಚರ್ಚೆ ಹರಟೆಯಾಗಬಾರದು. ಓದು ಆಯಾಸವಾಗಬಾರದು ಹಾಗೂ ನಿರಂತರ ಉತ್ಸಾಹ ನಿಮ್ಮಲ್ಲಿ ಇರಬೇಕಾದರೆ, ಪ್ರತಿನಿತ್ಯ ಕನಿಷ್ಠ ಅರ್ಧಗಂಟೆಯಾದರೂ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನ ಮಾಡಬೇಕು. ಇದರಿಂದ ನಮ್ಮ ದೇಹಕ್ಕೆ ಶುದ್ಧವಾದ ಆಮ್ಲಜನಕ ಪೂರೈಕೆಯಾಗುವುದಲ್ಲದೆ, ರಕ್ತ ಪರಿಚಲನೆ ನಿಯಮಿತಗೊಳ್ಳುವುದು. ಇದರಿಂದ ಉತ್ಸಾಹ ಹೆಚ್ಚಾಗುತ್ತದೆ. ಪ್ರಾಮಾಣಿಕವಾಗಿ ನಿಮ್ಮನ್ನು ಪರೀಕ್ಷೆಯಲ್ಲಿ ತೊಡಗಿಸಿಕೊಂಡರೆ, ನಿಮ್ಮ ತಯಾರಿ ಉತ್ತಮವಾಗಿರುತ್ತದೆ. ಯಾವುದೇ ಕಾರಣಕ್ಕೂ ಉತ್ಸಾಹ ಕಳೆದುಕೊಳ್ಳದೆ, ಒಂದೇ ಮನಸ್ಸಿನಿಂದ ತಯಾರಿಯಲ್ಲಿ ತೊಡಗಿಸಿಕೊಳ್ಳಿ. ನಿಲ್ಲಬೇಡಿ, ಮುನ್ನುಗ್ಗಿರಿ, ಯಶಸ್ಸು ಸಿಗಲಿ.

* ನಿಮ್ಮದೇ ಆದ ಟೈಮ್ ಟೇಬಲ್ ಹಾಕಿಕೊಳ್ಳಬೇಕು. ಪ್ರಾರಂಭದಲ್ಲಿ ಟೈಮ್ ಟೇಬಲ್ ಪಾಲನೆ ಮಾಡದೇ ಹೋಗಬಹುದು. ಆದರೆ, ನೀವು ನಿರಂತರವಾಗಿ ಪಾಲನೆ ಮಾಡಿದಂತೆ ರೂಢಿಯಾಗುತ್ತದೆ. ಟೈಮ್ ಟೇಬಲ್ ಇಲ್ಲದಿದ್ದರೆ, ಒಂದು ವಿಷಯ ಹೆಚ್ಚು ಓದುತ್ತೀರಿ, ಇನ್ನೊಂದು ವಿಷಯವನ್ನು ಕಡಿಮೆ ಓದುತ್ತೀರಿ. ನಾನು ಮಾಡೇ ಮಾಡ್ತೀನಿ ಎಂಬ ವಿಶ್ವಾಸ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿಮ್ಮ ಮೇಲಿನ ನಂಬಿಕೆಯನ್ನು ಹಾಗೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…