News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ಶಿಕ್ಷಣ

ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

2642

ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳ ಪಟ್ಟಿ :-

1) ಪ್ರಾಚೀನ ಭಾರತದ ಇತಿಹಾಸ – ಭಾರತ ಸರ್ಕಾರದ ಪ್ರಚಾರ ವಿಭಾಗ

2) ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಸಮಗ್ರ ಇತಿಹಾಸ – ಎಚ್.ಎನ್.ಬಸವರಾಜ

3) ಸಮಗ್ರ ಭಾರತದ ಇತಿಹಾಸ – ಡಾ|| ಕೆ.ಸದಾಶಿವ

4) ಕರ್ನಾಟಕ ಪರಂಪರೆ ಭಾಗ -೧

5) ಕರ್ನಾಟಕ ಪರಂಪರೆ ಭಾಗ -೨ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಪ್ರಕಟಿತ)

6) ಸ್ವತಂತ್ರ ಭಾರತ -1942 ರಿಂದ 2010 – ಪಾಲಾಕ್ಷ

7) ಆಧುನಿಕ ಭಾರತದ ಇತಿಹಾಸ – ಲೇ : ಕೆ.ನಾರಾಯಣ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)

8) ಕರ್ನಾಟಕ ಇತಿಹಾಸ – ಕೆ.ನಾರಾಯಣ

9) ಸ್ವತಂತ್ರ ಭಾರತ – ಕೆ.ನಾರಾಯಣ

10) ಕರ್ನಾಟಕ ಇತಿಹಾಸ – ಕ್ರಿ.ಶ. 1800-1956

11) ನಮ್ಮ ನಾಡು ಕರ್ನಾಟಕ – ಎಚ್.ಎಸ್.ಗೋಪಾಲರಾವ್12 ಸಮಗ್ರ ಕರ್ನಾಟಕ – ಪಾಲಾಕ್ಷ

13) ಕರ್ನಾಟಕ ಪ್ರವಾಸಿ ತಾಣಗಳು – ಶೇಷುನಾಥನ್ (ಸಾಧನಾ ಪ್ರಕಾಶನ ಬೆಂಗಳೂರು)

14) ಕರ್ನಾಟಕ ಕೈಗನ್ನಡಿ – ಸೂರ್ಯನಾಥ ಕಾಮತ್

15) ಪೂರ್ವ ಇತಿಹಾಸ – ಇರ್ಫಾನ್ ಹಬೀಬ್ (ಚಿಂತನ ಪ್ರಕಾಶನ, ಶಿರಸಿ)

16) ಸಾಮಾನ್ಯ ಭಾರತದ ಅರ್ಥಶಾಸ್ತ್ರ – ನೇ.ತಿ. ಸೋಮಶೇಖರ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)

17) ಭಾರತ ಸಂವಿಧಾನ – ಯಡಿಯೂರಪ್ಪ ತುಮಕೂರು

18) ಭಾರತ ಸಂವಿಧಾನ ಮತ್ತು ರಾಜಕೀಯ – ಎಚ್.ಎಮ್. ರಾಜಶೇಖರ

19) ನಮ್ಮ ನ್ಯಾಯಾಂಗ – ಬಿ.ಆರ್.ಅಗರವಾಲ್

20) ನಮ್ಮ ಸಂಸತ್ತು – ಸುಭಾಶ ಕಶ್ಯಪ್

21) ಭಾರತದ ಆರ್ಥಿಕ ಭೂಗೋಳಶಾಸ್ತ್ರ – ಪಿ.ಮಲ್ಲಪ್ಪ

22) ಭಾರತದ ಪ್ರಾದೇಶಿಕ ಮತ್ತು ಆರ್ಥಿಕ ಭೂಗೋಳಶಾಸ್ತ್ರ – ರಂಗನಾಥ

23) ಭೂಗೋಳ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ

24) ಇತಿಹಾಸ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ

25) ಕರ್ನಾಟಕ ವಿಶ್ವಕೋಶ ಭಾಗ -1

26) ಕರ್ನಾಟಕ ವಿಶ್ವಕೋಶ ಭಾಗ -2ಮೈಸೂರು ವಿಶ್ವವಿದ್ಯಾಲಯ

27) ಭಾರತದ ಆರ್ಥಿಕ ವ್ಯವಸ್ಥೆ – ಎಚ್.ಆರ್. ಕೃಷ್ಣೇಗೌಡ

28) ಕರ್ನಾಟಕದ ಆರ್ಥಿಕತೆ – ನೀ.ತಿ.ಸೋಮಶೇಖರ

29) ಕರ್ನಾಟಕ ಭೂಗೋಳ – ಪಿ.ಮಲ್ಲಪ್ಪ

30) ವಿಜ್ಞಾನ ಕಲಿಯೋಣ ಭಾಗ -1,2,3,4 – ಸಿ.ಎನ್.ಆರ್.ರಾವ್ ಮತ್ತು ಇಂದುಮತಿ ರಾವ್ – ನ್ಯಾಷನಲ್ ಬುಕ್ ಟ್ರಸ್ಟ್

31) ಜ್ಞಾನ ವಿಜ್ಞಾನ ಕೋಶ – ನವಕರ್ನಾಟಕ ಪ್ರಕಾಶನ

32) ನವಕರ್ನಾಟಕ ವಿಜ್ಞಾನ ಮಾಲಿಕೆಗಳು – 14 ಸರಣಿ

33) ಇದು ನಮ್ಮ ಕರ್ನಾಟಕ – ಚಾಣಕ್ಯ ಪ್ರಕಾಶನ

34) ಕನ್ನಡ ಕನ್ನಡಿಗ ಕರ್ನಾಟಕ – ಎಂ.ಚಿದಾನಂದ ಮೂರ್ತಿ

(dont buy all books, see the syllabus and according to that buy which ever you want)

Also refer:-                                                                                                  

NCRET and DCRET text books internet/web portals,

Kannada & English news papers,

Manorama, Indian year books, etc… yojana,

chronicle like magazines, some notes prepared by coaching institutes

 

2017ನೆ ಸಾಲಿನ ಕೆ.ಎ.ಎಸ್.(KAS) ಟಾಪರ್ ಐಶ್ವರ್ಯ ರವರ ಸಂಗ್ರಹ ಚಿತ್ರ.

ಕೆ.ಎ.ಎಸ್.(KAS) ಪರೀಕ್ಷೆಯ ತಯಾರಿಗಾಗಿ ಅಭ್ಯರ್ಥಿಯಲ್ಲಿ ಈ ಕೆಳಗಿನ ಗುಣಗಳು ಇರಬೇಕು :-

* ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು.

* ಪರೀಕ್ಷೆ ತಯಾರಿ ಮಾಡುವುದು ಬೇರೆ. ಅದರಲ್ಲಿ ಇಳಿಯುವುದು ಬೇರೆ. ಇಲ್ಲಿ ಪರೀಕ್ಷೆಗಾಗಿ ಆಳವಾದ ಅಧ್ಯಯನ ಮಾಡಬೇಕು. ಸಮುದ್ರ ಮೇಲ್ಗಡೆ ತೆರೆಗಳು ಹೆಚ್ಚಾಗಿ ಇರುವುವು. ಆದರೆ ಒಳಗೆ ಹೋದಂತೆ ಅಲ್ಲಿ ಪ್ರಶಾಂತತೆ ಇರುವುದು. ಅದೇ ರೀತಿ ಮೇಲ್ನೋಟಕ್ಕೆ ತಯಾರಿ ನಡೆಸಿದಾಗ ಮೈಂಡ್ ಡಿಸ್ಟರ್ಬ್ ಜಾಸ್ತಿ ಇರುವುದು. ಅದರಲ್ಲಿ ಆಳವಾಗಿ ತೊಡಗಿದಾಗ ನಮ್ಮ ಓದಿಗೆ ಡಿಸ್ಟರ್ಬ್ ಕಡಿಮೆಯಾಗುವುದು.

* ಪರೀಕ್ಷೆಗಾಗಿ ನಿಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಾಗ, ಅದರಿಂದ ಹೊರಗೆ ಬರಬಾರದು. ಅದನ್ನು ದೃಢತೆ ಎನ್ನುವರು. ದೃಢವಾದ ಮನಸ್ಸು ಇಟ್ಟು ತಯಾರಿ ನಡೆಸಬೇಕು. ಕೆಲವರು ಕೆ.ಎ.ಎಸ್. ಪರೀಕ್ಷೆಗಾಗಿ ಪೂರ್ಣ ತಯಾರಿ ನಡೆಸಿದ್ದಾಗ, ಇನ್ನೊಂದು ಪರೀಕ್ಷೆ ಕಾಲ್ ಫಾರ್ಂ ಆದ ಕೂಡಲೇ ಕೆ.ಎ.ಎಸ್. ಅಲ್ಲೇ ಬಿಟ್ಟು ಇನ್ನೊಂದು ಪರೀಕ್ಷೆಗೂ ತಯಾರಿ ನಡೆಸುತ್ತಾರೆ. ಅದನ್ನು ಪೂರ್ಣಗೊಳಿಸದೆ, ಮತ್ತೊಂದು ಪರೀಕ್ಷೆಗೆ ಜಿಗಿಯುತ್ತಾರೆ. ಇಂಥವರು ಯಾವ ಪರೀಕ್ಷೆಯಲ್ಲಿಯೂ ಯಶಸ್ವಿಯಾಗುವುದಿಲ್ಲ.

* ಇಂಥ ಪರೀಕ್ಷೆ ತಯಾರಿ ನಡೆಸಿದಾಗ ನಿಮ್ಮ ಮನಸ್ಸನ್ನು ಆಕರ್ಷಣೆಯಿಂದ ದೂರ ಇಡಬೇಕು. ಆಕರ್ಷಣೆಗೆ ಒಳಗಾಗಿ ಓದುತ್ತಾ ಇದ್ದಾಗ ಅಭ್ಯಾಸ ಪರಿಪೂರ್ಣವಾಗುವುದಿಲ್ಲ. ಮುಗ್ಧ ಮನಸ್ಸು ಏಕಾಗ್ರತೆಗೊಳ್ಳುವುದಿಲ್ಲ. ಯಾವುದೋ ಭಾವಲೋಕದಲ್ಲಿ ಓದುತ್ತಾ ಇರುವುವರು ಅವರು ಎಷ್ಟೇ ಗಂಟೆ ಓದಿದರೂ ಕೂಡಾ, ತಾವು ಯಾವುದು ಓದಿದ್ದು ಎಂಬುದು ಗೊತ್ತಿರುವುದಿಲ್ಲ.

* ಈ ಪರೀಕ್ಷೆಗೆ ಏಷ್ಟು ಗಂಟೆ ತಯಾರಿ ನಡೆಸಬೇಕು ಎಂಬ ಪ್ರಶ್ನೆ ಬಹಳಷ್ಟು ಅಭ್ಯರ್ಥಿಗಳ ಪ್ರಶ್ನೆಯಾಗಿದೆ. ನನ್ನ ಪ್ರಕಾರ ಕನಿಷ್ಠ 12 ರಿಂದ 14ತಾಸು ಓದಬೇಕು. ಕೆಲವರಿಗೆ ಗಾಬರಿಯಾಗಬಹುದು. ಇದಕ್ಕಿಂತ ಕಡಿಮೆ ಅವಧಿಯನ್ನು ತೆಗೆದುಕೊಂಡರೆ, ವಿಷಯವನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲವೆನೋ ಎಂದು ಕೆಲವರು ಹೇಳುವ ಪ್ರಕಾರ ಎಷ್ಟು ಗಂಟೆ ಓದುವುದು ಮುಖ್ಯವಲ್ಲ ಎಷ್ಟು ವಿಷಯ ತಿಳಿದುಕೊಂಡೆವು ಎಂಬುವುದು ಮುಖ್ಯವಾಗುತ್ತದೆ. ಆದರೆ, ಅಧ್ಯಯನಕ್ಕೆ ಕೂಡುವ ಅವಧಿ ಹೆಚ್ಚಿದಂತೆ, ಸಹಜವಾಗಿ ಏಕಾಗ್ರತೆ ಹಾಗೂ ಅರ್ಥ ಮಾಡಿಕೊಳ್ಳುವುದು.

* ಸಾಮಾನ್ಯವಾಗಿ ಯಾವ ಸಮಯದಲ್ಲಿ ಓದಬೇಕು ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ಇಲ್ಲಿ ಯಾವ ಸಮಯದಲ್ಲಿ ಓದುತ್ತೇನೆ ಎಂಬುದು ಮುಖ್ಯವಲ್ಲ. ಯಾವುದೇ ಸಮಯದಲ್ಲಿ ಓದಿ ಆದರೆ, ಮನಸ್ಸು ಕೊಟ್ಟು ಅಧ್ಯಯನ ಮಾಡಿ. ಸಾಮಾನ್ಯವಾಗಿ ಇಂಥ ಪರೀಕ್ಷೆಗೆ ತಯಾರಿ ನಡೆಸುವವರು ರಾತ್ರಿಯೇ ಹೆಚ್ಚು ಅಧ್ಯಯನ ಮಾಡುತ್ತಾರೆ.

* ಈ ಪರೀಕ್ಷೆಗೆ ವಿಶೇಷ ತಯಾರಿ ಹಾಗೂ ಪರಿಶ್ರಮ ಬೇಕಾಗುವುದು. ಅದಕ್ಕಾಗಿ ಸಹನೆ ಇರಬೇಕು. ನಿರಂತರ ಓದುತ್ತಾ ಇದ್ದಾಗ, ಅದನ್ನು ಬಿಟ್ಟು ಓಡಿಹೋಗೋಣ ಎಂಬ ಮನಸ್ಸು ಬರುತ್ತದೆ. ಕೆಲವರು 11ಹೆಜ್ಜೆವರೆಗೆ ಬಂದಿರುತ್ತಾರೆ. ಇನ್ನೊಂದು ಹೆಜ್ಜೆ ಇಟ್ಟರೆ, ಗುರಿ ಮುಟ್ಟಲು ಸಾಧ್ಯವಿರುತ್ತದೆ. ಅದನ್ನು ಗುರ್ತಿಸದೆ, ಸಹನೆ ಕಳೆದುಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಾರೆ. ಓಡಿ ಹೋಗುತ್ತಾರೆ.

* ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಗೆ ತಯಾರಿ ಮಾಡುವಾಗ ನಮ್ಮ ಓದು ಎಷ್ಟು ಮುಖ್ಯವಾಗಿರುತ್ತದೆ. ಅಷ್ಟೇ ಮುಖ್ಯ ನಮಗೆ ಪ್ರೇರಣೆ ಹಾಗೂ ಸ್ಫೂರ್ತಿ. ಅದಕ್ಕಾಗಿ ಈಗಾಗಲೇ ಯಶಸ್ವಿಯಾದವರ ಸಂದರ್ಶನ ಓದಿ ಹಾಗೂ ಕೆ.ಎ.ಎಸ್. ಪರೀಕ್ಷೆಗೆ ಸಂಬಂಧಪಟ್ಟ ಸೆಮಿನಾರ್‌ಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮ ಮನಸ್ಸು ಗಟ್ಟಿಯಾಗುತ್ತದೆ. ನಮ್ಮ ಸ್ಪರ್ಧಾ ಚಾಣಕ್ಯ ಪತ್ರಿಕೆಯಲ್ಲಿ ಪ್ರತಿ ತಿಂಗಳು ಸಾಧಕರ ಬಗ್ಗೆ ಪ್ರಕಟಿಸಿದ್ದೇವೆ. ಒಮ್ಮೆ ಓದಿ ನೋಡಿ. ಸಾಧಿಸಲು ಅವರು ತೆಗೆದುಕೊಂಡ ಸಮಯ, ಯಶಸ್ಸಿಗಾಗಿ ಪಟ್ಟ ಪರಿಶ್ರಮ ಎಲ್ಲವೂ ಗೊತ್ತಾಗುತ್ತದೆ.

* ಓದುವಾಗ ಯಾವುದೇ ವಿಷಯ ತಿಳಿಯದಿದ್ದಾಗ ಗಾಬರಿಯಾಬೇಡಿ. ಎಲ್ಲರಿಗೂ ಎಲ್ಲಾ ವಿಷಯ ಗೊತ್ತಿರುವುದಿಲ್ಲ. ಯಾಕೆಂದರೆ ಯಾರೂ ಇಲ್ಲಿಯವರೆಗೆ 100ಕ್ಕೆ 100ಅಂಕಗಳನ್ನು ತೆಗೆದುಕೊಂಡ ಉದಾಹರಣೆ ಇಲ್ಲ. ಕೆಲವರು ಒಂದೂ ಪ್ರಶ್ನೆ ಬರದಿದ್ದಾಗ ನಾನು ದಡ್ಡನೆಂಬ ಭಾವನೆ ಬೆಳೆಸಿಕೊಂಡು ಉತ್ಸಾಹ ಕಳೆದುಕೊಳ್ಳುತ್ತಾರೆ.

* ಕೆಲವರಿಗೆ ಈ ಪರೀಕ್ಷೆ ಎಂದರೆ ಪುಸ್ತಕಗಳನ್ನು ಸಂಗ್ರಹಿಸುವುದು ಎಂದು ತಿಳಿದುಕೊಂಡು ಎಲ್ಲಾ ಪುಸ್ತಕಗಳನ್ನು ಖರೀದಿಸುತ್ತಾರೆ. ಆದರೆ, ಯವುದನ್ನು ಪೂರ್ಣವಾಗಿ ಓದುವುದಿಲ್ಲ. ಉತ್ತಮ ಪುಸ್ತಕಗಳು ಇದ್ದರೆ ಸಾಕು. ಮುಂದಿನ ಸಂಚಿಕೆಯಲ್ಲಿ ಕೆ.ಎ.ಎಸ್. ಪರೀಕ್ಷೆ ತಯಾರಿಗೆ ಇರುವ ಉತ್ತಮ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸುತ್ತೇವೆ.

* ಉನ್ನತ ಪರೀಕ್ಷೆ ಬರೆಯಬೇಕಾದರೆ ಅಧ್ಯಯನದ ಕೊಠಡಿಯು ಕೂಡ ಅಷ್ಟೇ ಉತ್ತಮವಾಗಿರಬೇಕು. ಅಲ್ಲಿಯ ವಾತಾವರಣ ಬಹಳ ಚೆನ್ನಾಗಿರಬೇಕು. ಒಂದು ವೇಳೆ ನೀವು ಇರುವ ರೂಮಿನಲ್ಲಿ ಎಲ್ಲರೂ ಕೆ.ಎ.ಎಸ್. ಆಕಾಂಕ್ಷಿಗಳು ಇದ್ದರೆ ಚೆಂದ. ಬೇರೆ ಪರೀಕ್ಷೆಗೆ ತಯರಾಗುವವರ ಜೊತೆ ಇರಬಾರದು. ಯಾಕೆಂದರೆ, ನಿಮ್ಮದೇ ಕೆ.ಎ.ಎಸ್. ವಾತಾವರಣ ಇರುವುದಿಲ್ಲ. ಹಾಗೂ ಸ್ಫೂರ್ತಿ ಉಂಟಾಗುವುದಿಲ್ಲ.

* ಬೇರೆಯವರು ಓದುವುದನ್ನು ನೋಡಿ, ಅವರ ಪುಸ್ತಕಗಳ ಸಂಗ್ರಹ ನೋಡಿ, ಅವರ ಚರ್ಚೆಯನ್ನು ನೋಡಿ ನೀವು ಗಾಬರಿಯಾಗಬೇಡಿ. ಯಾವತ್ತೂ ಮತ್ತೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಓದುವಾಗ ನಿಮ್ಮದೇ ಶೈಲಿ ರೂಢಿಸಿಕೊಂಡು ಓದಬೇಕು.

* ಓದುವಾಗ ಮುಖ್ಯವಾದ ವಿಷಯಗಳನ್ನು ಕುರಿತು ನಿಮ್ಮದೇ ಆದ ನೋಟ್ಸ್ ಮಾಡಿಕೊಳ್ಳುವುದು ಉತ್ತಮ. ಸಮಯ ಇರದಿದ್ದಾಗ ಮಾತ್ರ ಪುಸ್ತಕದಲ್ಲಿ ಅಂಡರಲೈನ್ ಮಾಡಿಕೊಳ್ಳಿ. ಇದರಿಂದ ವೇಗವಾಗಿ ಪುನರ್ ಅಧ್ಯಯನ ಮಾಡಲು ಹಾಗೂ ನೆನಪಿಟ್ಟುಕೊಳ್ಳಲು ಸುಲಭವಾಗುತ್ತದೆ.

* ಇದಕ್ಕಾಗಿ ಗೆಳೆಯರ ಗುಂಪು ಮಾಡಿಕೊಳ್ಳಿ. ಯಾವುದೇ ಕಾರಣಕ್ಕೂ ಏಕಾಂಗಿ ಓದಬೇಡಿ. ಗುಂಪು ಚರ್ಚೆ ಮಾಡುವಾಗ ಹೊಸ ಹೊಸ ವಿಷಯ ತಿಳಿಯುವುದು ಅಲ್ಲದೆ ಚರ್ಚೆ ಮಾಡಿದ ವಿಷಯವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ.

* ಚರ್ಚೆ ಹರಟೆಯಾಗಬಾರದು. ಓದು ಆಯಾಸವಾಗಬಾರದು ಹಾಗೂ ನಿರಂತರ ಉತ್ಸಾಹ ನಿಮ್ಮಲ್ಲಿ ಇರಬೇಕಾದರೆ, ಪ್ರತಿನಿತ್ಯ ಕನಿಷ್ಠ ಅರ್ಧಗಂಟೆಯಾದರೂ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನ ಮಾಡಬೇಕು. ಇದರಿಂದ ನಮ್ಮ ದೇಹಕ್ಕೆ ಶುದ್ಧವಾದ ಆಮ್ಲಜನಕ ಪೂರೈಕೆಯಾಗುವುದಲ್ಲದೆ, ರಕ್ತ ಪರಿಚಲನೆ ನಿಯಮಿತಗೊಳ್ಳುವುದು. ಇದರಿಂದ ಉತ್ಸಾಹ ಹೆಚ್ಚಾಗುತ್ತದೆ. ಪ್ರಾಮಾಣಿಕವಾಗಿ ನಿಮ್ಮನ್ನು ಪರೀಕ್ಷೆಯಲ್ಲಿ ತೊಡಗಿಸಿಕೊಂಡರೆ, ನಿಮ್ಮ ತಯಾರಿ ಉತ್ತಮವಾಗಿರುತ್ತದೆ. ಯಾವುದೇ ಕಾರಣಕ್ಕೂ ಉತ್ಸಾಹ ಕಳೆದುಕೊಳ್ಳದೆ, ಒಂದೇ ಮನಸ್ಸಿನಿಂದ ತಯಾರಿಯಲ್ಲಿ ತೊಡಗಿಸಿಕೊಳ್ಳಿ. ನಿಲ್ಲಬೇಡಿ, ಮುನ್ನುಗ್ಗಿರಿ, ಯಶಸ್ಸು ಸಿಗಲಿ.

* ನಿಮ್ಮದೇ ಆದ ಟೈಮ್ ಟೇಬಲ್ ಹಾಕಿಕೊಳ್ಳಬೇಕು. ಪ್ರಾರಂಭದಲ್ಲಿ ಟೈಮ್ ಟೇಬಲ್ ಪಾಲನೆ ಮಾಡದೇ ಹೋಗಬಹುದು. ಆದರೆ, ನೀವು ನಿರಂತರವಾಗಿ ಪಾಲನೆ ಮಾಡಿದಂತೆ ರೂಢಿಯಾಗುತ್ತದೆ. ಟೈಮ್ ಟೇಬಲ್ ಇಲ್ಲದಿದ್ದರೆ, ಒಂದು ವಿಷಯ ಹೆಚ್ಚು ಓದುತ್ತೀರಿ, ಇನ್ನೊಂದು ವಿಷಯವನ್ನು ಕಡಿಮೆ ಓದುತ್ತೀರಿ. ನಾನು ಮಾಡೇ ಮಾಡ್ತೀನಿ ಎಂಬ ವಿಶ್ವಾಸ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿಮ್ಮ ಮೇಲಿನ ನಂಬಿಕೆಯನ್ನು ಹಾಗೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…