ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲೇ ಅತ್ಯಂತ ದೊಡ್ಡ ಮೆಟ್ರೋ ನಿಲ್ದಾಣ, ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿರುವ, ಮೆಜೆಸ್ಟಿಕ್ನ ‘ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.
ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿದ್ದು, ಪ್ರಯಾಣಿಕರಿಗೆ ಆಸನ ವ್ಯವಸ್ಥೆ, ಮಾರ್ಗಸೂಚಿ ಫಲಕಗಳನ್ನು ಅಳವಡಿಸುವ ಸಣ್ಣಪುಟ್ಟ ಕೆಲಸಗಳು ಮಾತ್ರ ಬಾಕಿ ಇದ್ದು ಸ್ವಲ್ಪ ದಿನಗಳಲ್ಲೇ ಪೂರ್ಣಗೊಳ್ಳಲಿದೆ.
ಈ ನಿಲ್ದಾಣಕ್ಕೆ ಬರುವ ರೈಲುಗಳು ನಗರದ ನಾಲ್ಕೂ ದಿಕ್ಕಿನಿಂದ ಪ್ರಯಾಣಿಕರನ್ನು ಹೊತ್ತು ತರಲಿವೆ. ಉತ್ತರ–ದಕ್ಷಿಣ ಕಾರಿಡಾರ್ (ಯಲಚೇನಹಳ್ಳಿ– ನಾಗಸಂದ್ರ ಮಾರ್ಗ) ಹಾಗೂ ಪೂರ್ವ ಪಶ್ಚಿಮ ಕಾರಿಡಾರ್ (ಬೈಯಪ್ಪನಹಳ್ಳಿ– ಮೈಸೂರು ರಸ್ತೆ ಮಾರ್ಗ) ಪ್ರಯಾಣಿಕರು ಮಾರ್ಗ ಬದಲಾಯಿಸಲು ಈ ನಿಲ್ದಾಣವನ್ನು ಬಳಸಬಹುದು.
ಪ್ರಸ್ತುತ ಈ ನಿಲ್ದಾಣ ದಿನವೊಂದಕ್ಕೆ ಸರಾಸರಿ 39,000 ಪ್ರಯಾಣಿಕರನ್ನು ನಿರ್ವಹಣೆ ಮಾಡುತ್ತಿದೆ. ‘ನಮ್ಮ ಮೆಟ್ರೊ’ ಯೋಜನೆಯ ಮೊದಲ ಹಂತದ ಎಲ್ಲಾ ಮಾರ್ಗಗಳಲ್ಲೂ ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರ ಆರಂಭವಾದ ಬಳಿಕ ಇಲ್ಲಿ ಪ್ರಯಾಣಿಕರ ದಟ್ಟಣೆ ಮೂರು ಪಟ್ಟು ಹೆಚ್ಚಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೆಜೆಸ್ಟಿಕ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಕೇಂದ್ರ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುತ್ತದೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವೂ (ನಗರ ರೈಲು ನಿಲ್ದಾಣ) ಇಲ್ಲಿಂದ ಕೆಲವೇ ಮೀಟರ್ಗಳಷ್ಟು ದೂರದಲ್ಲಿದೆ. ಈ ನಿಲ್ದಾಣವನ್ನು ಬಳಸುವವರ ಪೈಕಿ ರಾಜಧಾನಿಯಿಂದ ಬೇರೆ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚು.

ಮೆಜೆಸ್ಟಿಕ್ನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ನಿಲ್ದಾಣವೂ ಮೆಟ್ರೊ ನಿಲ್ದಾಣದ ಪಕ್ಕದಲ್ಲೇ ಇದೆ. ಬಿಎಂಟಿಸಿ ಬಸ್ ಬಳಸಿ ನಗರದ ಬೇರೆ ಬೇರೆ ಪ್ರದೇಶಗಳಿಗೆ ತಲುಪುವವರೂ ಈ ನಿಲ್ದಾಣವನ್ನು ಬಳಸುತ್ತಾರೆ. ಹಾಗಾಗಿ ಉಳಿದ ಮೆಟ್ರೊ ನಿಲ್ದಾಣಗಳಿಗಿಂತ ಇಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚು ಇರುತ್ತದೆ.
ಈ ನಿಲ್ದಾಣ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ಈ ದಿನಗಳಿಗಾಗಿ ನಾವು ಕಾತರದಿಂದ ಕಾಯುತ್ತಿದ್ದೆವು. ನಗರಕ್ಕೆ ಪ್ರಮುಖ ಮೂಲಸೌಕರ್ಯವನ್ನು ನಿರ್ಮಿಸುವಲ್ಲಿ ಕಾರ್ಯನಿರ್ವಹಿಸಿದ ಹೆಮ್ಮೆ ನಮ್ಮದು’ ಎಂದು ಅಧಿಕಾರಿಗಳು ತಮ್ಮ ಖುಷಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.